ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಬಿಜೆಪಿ ನಿಯೋಗ ಪೊಲೀಸರ ಆತ್ಮ ಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡ್ತಾ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇವರು ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾಂಗ್ರೆಸ್ ಪಕ್ಷದ ನಿಯೋಗವು ಇಲ್ಲಿನ ಅಧಿಕಾರಿಗಳನ್ನು, ಧಾರ್ಮಿಕ ಮುಖಂಡರನ್ನು, ಕಾರ್ಮಿಕ ವಲಯ ಸದಸ್ಯರನ್ನು, ಜನ ಸಾಮಾನ್ಯರನ್ನು ಬೇಟಿಯಾಗಿ ಈ ಜಿಲ್ಲೆಯಲ್ಲಿ ಶಾಶ್ವತವಾಗಿ ಶಾಂತಿ ಸೌಹಾರ್ದತೆಯನ್ನು ಕಾಪಾಡುವುದರ ಬಗ್ಗೆ ಚರ್ಚೆ ನಡೆಸಿದ್ರು. ಇನ್ನೆರಡು ದಿನಗಳಲ್ಲಿ ನಿಯೋಗದ ವರದಿಯು ಜಾರಿಗೆ ಬರಲಿದೆ. ಆದ್ರೆ ಎರಡು ದಿನಗಳ ಹಿಂದೆ ಬಂದ ಬಿಜೆಪಿ ಪಕ್ಷ ಪೊಲೀಸರ ಕ್ರಮಗಳನ್ನು ಪ್ರಶ್ನೆ ಮಾಡ್ತಾ ಇದ್ದಾರೆ. ಪೊಲೀಸರ ವಿರುದ್ದ ಲಘುವಾದ ಹೇಳಿಕೆಗಳನ್ನು ನೀಡ್ತಾ ಇದ್ದಾರೆ. ಅವರಿಗೆ ಈ ಜಿಲ್ಲೆಯ ಅಭಿವೃದ್ಧಿ ಮುಖ್ಯವಲ್ಲ. ಬದಲಾಗಿ ಅಶಾಂತಿ ನಿರ್ಮಾಣ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ನವೀನ್ ಡಿ ಸೌಝ, ಪ್ರಕಾಶ್ ಸಾಲಿಯಾನ್, ನಿರಾಜ್ ಚಂದ್ರಪಾಲ್, ಕೇಶವ ಮಾರೋಳಿ, ಲಾರೆನ್ಸ್ ಡಿ ಸೌಝ, ಸುಹಾನ್ ಆಳ್ವಾ, ಶುಭೋದಯ ಆಳ್ವಾ ಉಪಸ್ಥಿತರಿದ್ರು.
ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು,…
ಮೂಲ್ಕಿಯ ಶಾಂಭವಿ ಹೊಳೆಯ ಬಪ್ಪನಾಡು ಭಾಗದಲ್ಲಿ ಅಪರಿಚಿತ ಶವ ಕಂಡುಬ0ದಿದೆ. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನ…
ಹಿ0ದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದು ಹತ್ಯಾ…
ಮಂಗಳೂರಿನಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣವಿತ್ತು. ಸಂಜೆಯಾಗುತ್ತಲೇ ಎಡೆಬಿಡದೇ ಮಳೆ ಸುರಿಯುತ್ತಿದೆ. ವಾಹನ ಸಂಚಾರಕ್ಕೂ…
ಕೊಲ್ಲೂರು ದೇವಳಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿದ್ದಾರೆ. ಕೊಲ್ಲೂರಿನಲ್ಲಿ ಮೂಕಾಂಬಿಕೆಯ ದರ್ಶನ ಪಡೆದ ಗೃಹಸಚಿವರು, ಬಳಿಕ ದೇವಳದಲ್ಲಿ ವಿಶೇಷ…
ಕನ್ಸ್ಟಕ್ಷನ್ ಸಂಸ್ಥೆಯೊ0ದರ ಸಹ ಗುತ್ತಿಗೆದಾರನ ಬಿಲ್ ಕೇಳಲು ಹೋದಾಗ ಅಲ್ಲಿನ ಡೆಪ್ಯುಟಿ ಚೇರ್ಮೆನ್ ಜೊತೆ ಗೌರವಯುತವಾಗಿ ವರ್ತಿಸಿದ್ದೇನೆ. ಆದರೆ 26…