ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ಉಚಿತ ತೆಂಕುತಿಟ್ಟು ಯಕ್ಷಗಾನ ತರಗತಿಯು ಶ್ರೀ ಸೋದೆ ಮಠದ ಯತಿಗಳ ಕೃಪಾಶೀರ್ವಾದದಿಂದ ಯಶಸ್ವಿಯಾಗಿ ಎಂಟು ಸಂವತ್ಸರಗಳನ್ನು ಪೂರೈಸಿದೆ.
ಇದರ 8ನೇ ವರ್ಷದ ವಾರ್ಷಿಕೋತ್ಸವ ಮತ್ತು ಪಣಂಬೂರು ವೆಂಕಟ್ರಾಯ ಐತಾಳ ಸಂಸ್ಮರಣಾ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ ಕಾರ್ಯಕ್ರಮವು ಜೂನ್ 15 ರಂದು ಮಧ್ಯಾಹ್ನ 2.30ಕ್ಕೆ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮ ಸಂಜೆ 5. 30 ಗಂಟೆಗೆ ನಡೆಯಲಿದೆ. ಈ ಬಗ್ಗೆ ಸಂಘಟಕರು ಮಾತನಾಡಿ, ಈ ಪ್ರಯುಕ್ತ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ಮತ್ತು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮವು ಎಂದು ಉಡುಪಿಯಲ್ಲಿ ಮಾಹಿತಿ ನೀಡಿದ್ದಾರೆ.