ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಬ್ಬಿಣದ ತಡೆಯನ್ನು ಮುರಿದು ಹಾಕಿ ಸರಕಾರಕ್ಕೆ ಸಾವಿರಾರು ರೂ.ನಷ್ಟ

ಪಾಣೆಮಂಗಳೂರು ಸೇತುವೆ ಮೇಲೆ ಸಂಚಾರ ನಿಷೇಧ ಹೇರಿ ಹಾಕಲಾದ ಕಬ್ಬಿಣದ ತಡೆಯನ್ನು ಮುರಿದು ಸರಕಾರಕ್ಕೆ ಸಾವಿರಾರು ರೂಪಾಯಿ ನಷ್ಟ ಉಂಟು ಮಾಡಿದ ವಾಹನ ಚಾಲಕನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ಪುರಸಭೆ ಮುಖ್ಯಾಧಿಕಾರಿ ನಝೀರ್ ಅಹಮದ್ ಅವರು ದೂರು ನೀಡಿದ್ದಾರೆ.

 

ಬಂಟ್ವಾಳ ತಾಲೂಕು ಬಿ ಮೂಡಾ ಗ್ರಾಮದ ಹಳೇ ರಾಷ್ಟ್ರೀಯ ಹೆದ್ದಾರಿ ಎನ್. ಹೆಚ್. 48 ರ ಸೇತುವೆಯನ್ನು 2004-05 ರಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ನಿರ್ವಹಣೆ ಮತ್ತು ದುರಸ್ಥಿ ಬಗ್ಗೆ ಪುರಸಭೆಗೆ ಹಸ್ತಾಂತರಿಸಿದ್ರು. ಇದು ಸ್ವಾತಂತ್ರ‍್ಯ ಪೂರ್ವ ಕಾಲದ ಸೇತುವೆಯಾಗಿದ್ದು, ಈ ಹಳೆಯ ಸೇತುವೆಯಲ್ಲಿ ಪ್ರಸ್ತುತ ಸರಕಾರ ಘನ ವಾಹನ ಸಂಚಾರವನ್ನು ನಿರ್ಬಂಧಿಸಿ ರಸ್ತೆಯ 2 ಬದಿಗಳಲ್ಲಿ ಕಬ್ಬಿಣದ ತಡೆಗಳನ್ನು ಹಾಕಿ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ರಸ್ತೆಯಲ್ಲಿ ಸಾವರ್ಜನಿಕ ಲಘು ವಾಹನಗಳು ಮಾತ್ರ ಸಂಚರಿಸುತ್ತಿರುವುದಾಗಿದೆ.

 

ಜೂನ್. 9 ರಂದು ಕೆಎ.19.ಎಇ.5621 ನೇ ವಾಹನವನ್ನು ಅದರ ಚಾಲಕರು ಸೇತುವೆಯ ಧಾರಣ ಸಾಮರ್ಥ್ಯ ದ ಬಗ್ಗೆ ಆಳವಡಿಸಿದ ಕಬ್ಬಿಣದ ತಡೆಯನ್ನು ಮುರಿದು ಹಾಕಿ ಸರಕಾರಕ್ಕೆ ಸುಮಾರು ರೂ 80,000 ದಷ್ಟು ನಷ್ಟವನ್ನು ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾವರ್ಜನಿಕ ಸೇತುವೆಯ ಉಪಯೋಗಕ್ಕೆ ಆಳವಡಿಸಿದ ಧಾರಣ ಸಾಮರ್ಥ್ಯ ದ ಬಗ್ಗೆ ಆಳವಡಿಸಿದ ಕಬ್ಬಿಣದ ತಡೆಯನ್ನು ಮುರಿದು ಸರಕಾರಕ್ಕೆ ನಷ್ಟ ಉಂಟು ಮಾಡಿದ ವಾಹನ ಮತ್ತು ಚಾಲಕರ ಮೇಲೆ ಕಾನೂನು ಕ್ರಮಕೈಗೊಳ್ಳವಂತೆ ಮುಖ್ಯಾಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!