ದೇರಳಕಟ್ಟೆ ಬೆಳ್ಮ ಗ್ರಾಮದ ಕಾನೆಕೆರೆ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಾಲಕಿಯೊಬ್ಬಳು ಮೃತಪಟ್ಟ ಘಟನೆಗೆ ಸಂಬAಧಿಸಿದAತೆ ದುರಂತ ನಡೆದ ಮನೆಗೆ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾದ್ಯಮದವರ ಜೊತೆ ಮಾತನಾಡಿದ ಅವರು, ಕಾನಕೆರೆಯ ಈ ಪ್ರದೇಶದಲ್ಲಿ ತುಂಬಾ ಗಂಭೀರ ಪರಿಸ್ಥಿತಿ ಇದೆ.
ಮಳೆಗಾಲ ಮುಗಿಯುವ ತನಕ ತಾತ್ಕಾಲಿಕವಾಗಿ ಇನ್ನಷ್ಟು ಗುಡ್ಡ ಕುಸಿಯದಂತೆ ಸಂರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗುಡ್ಡ ಕುಸಿದ ಜಾಗದಲ್ಲೆ ಮನೆ ನಿರ್ಮಿಸಲು ಕಾನೂನಿನ ಅವಕಾಶವಿಲ್ಲ. ಪರ್ಯಾಯವಾಗಿ ಪ್ರಕೃತಿ ವಿಕೋಪದಡಿ ಅವಕಾಶಗಳ ಬಗೆಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಅಲ್ಲದೆ ಮಾನವೀಯತೆ ದೃಷ್ಟಿಯಿಂದ ಇನ್ನಷ್ಟು ಅನುಕೂಲತೆ ಮತ್ತು ಅನುದಾನ ಒದಗಿಸಿಕೊಡುವಂತೆ ಮತ್ತೊಮ್ಮೆ ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿಯವರೊAದಿಗೆ ಚರ್ಚಿಸುತ್ತೇನೆ ಎಂದಿದ್ದಾರೆ. ಬಳಿಕ ಮಂಜನಾಡಿ ಗ್ರಾಮದ ಮೊಂಟೆಪದವು ಕೊಪ್ಪಳ ಪ್ರದೇಶದಲ್ಲಿ ಗುಡ್ಡದೊಂದಿಗೆ ಮನೆ ಕುಸಿದು ನಡೆದ ದುರಂತದಲ್ಲಿ ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಯಲ್ಲಿರುವ ಅಶ್ವಿನಿ ಹಾಗೂ ಕಾಂತಪ್ಪ ಪೂಜಾರಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.