ದೇರಳಕಟ್ಟೆ ಬೆಳ್ಮ ಗ್ರಾಮದ ಕಾನೆಕೆರೆ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಾಲಕಿಯೊಬ್ಬಳು ಮೃತಪಟ್ಟ ಘಟನೆಗೆ ಸಂಬAಧಿಸಿದAತೆ ದುರಂತ ನಡೆದ ಮನೆಗೆ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾದ್ಯಮದವರ ಜೊತೆ ಮಾತನಾಡಿದ ಅವರು, ಕಾನಕೆರೆಯ ಈ ಪ್ರದೇಶದಲ್ಲಿ ತುಂಬಾ ಗಂಭೀರ ಪರಿಸ್ಥಿತಿ ಇದೆ.
ಮಳೆಗಾಲ ಮುಗಿಯುವ ತನಕ ತಾತ್ಕಾಲಿಕವಾಗಿ ಇನ್ನಷ್ಟು ಗುಡ್ಡ ಕುಸಿಯದಂತೆ ಸಂರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗುಡ್ಡ ಕುಸಿದ ಜಾಗದಲ್ಲೆ ಮನೆ ನಿರ್ಮಿಸಲು ಕಾನೂನಿನ ಅವಕಾಶವಿಲ್ಲ. ಪರ್ಯಾಯವಾಗಿ ಪ್ರಕೃತಿ ವಿಕೋಪದಡಿ ಅವಕಾಶಗಳ ಬಗೆಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಅಲ್ಲದೆ ಮಾನವೀಯತೆ ದೃಷ್ಟಿಯಿಂದ ಇನ್ನಷ್ಟು ಅನುಕೂಲತೆ ಮತ್ತು ಅನುದಾನ ಒದಗಿಸಿಕೊಡುವಂತೆ ಮತ್ತೊಮ್ಮೆ ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿಯವರೊAದಿಗೆ ಚರ್ಚಿಸುತ್ತೇನೆ ಎಂದಿದ್ದಾರೆ. ಬಳಿಕ ಮಂಜನಾಡಿ ಗ್ರಾಮದ ಮೊಂಟೆಪದವು ಕೊಪ್ಪಳ ಪ್ರದೇಶದಲ್ಲಿ ಗುಡ್ಡದೊಂದಿಗೆ ಮನೆ ಕುಸಿದು ನಡೆದ ದುರಂತದಲ್ಲಿ ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಯಲ್ಲಿರುವ ಅಶ್ವಿನಿ ಹಾಗೂ ಕಾಂತಪ್ಪ ಪೂಜಾರಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…