ದೇರಳಕಟ್ಟೆ ಬೆಳ್ಮ ಗ್ರಾಮದ ಕಾನೆಕೆರೆ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಾಲಕಿಯೊಬ್ಬಳು ಮೃತಪಟ್ಟ ಘಟನೆಗೆ ಸಂಬAಧಿಸಿದAತೆ ದುರಂತ ನಡೆದ ಮನೆಗೆ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾದ್ಯಮದವರ ಜೊತೆ ಮಾತನಾಡಿದ ಅವರು, ಕಾನಕೆರೆಯ ಈ ಪ್ರದೇಶದಲ್ಲಿ ತುಂಬಾ ಗಂಭೀರ ಪರಿಸ್ಥಿತಿ ಇದೆ.
ಮಳೆಗಾಲ ಮುಗಿಯುವ ತನಕ ತಾತ್ಕಾಲಿಕವಾಗಿ ಇನ್ನಷ್ಟು ಗುಡ್ಡ ಕುಸಿಯದಂತೆ ಸಂರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗುಡ್ಡ ಕುಸಿದ ಜಾಗದಲ್ಲೆ ಮನೆ ನಿರ್ಮಿಸಲು ಕಾನೂನಿನ ಅವಕಾಶವಿಲ್ಲ. ಪರ್ಯಾಯವಾಗಿ ಪ್ರಕೃತಿ ವಿಕೋಪದಡಿ ಅವಕಾಶಗಳ ಬಗೆಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಅಲ್ಲದೆ ಮಾನವೀಯತೆ ದೃಷ್ಟಿಯಿಂದ ಇನ್ನಷ್ಟು ಅನುಕೂಲತೆ ಮತ್ತು ಅನುದಾನ ಒದಗಿಸಿಕೊಡುವಂತೆ ಮತ್ತೊಮ್ಮೆ ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿಯವರೊAದಿಗೆ ಚರ್ಚಿಸುತ್ತೇನೆ ಎಂದಿದ್ದಾರೆ. ಬಳಿಕ ಮಂಜನಾಡಿ ಗ್ರಾಮದ ಮೊಂಟೆಪದವು ಕೊಪ್ಪಳ ಪ್ರದೇಶದಲ್ಲಿ ಗುಡ್ಡದೊಂದಿಗೆ ಮನೆ ಕುಸಿದು ನಡೆದ ದುರಂತದಲ್ಲಿ ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಯಲ್ಲಿರುವ ಅಶ್ವಿನಿ ಹಾಗೂ ಕಾಂತಪ್ಪ ಪೂಜಾರಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…