ಜನ ಮನದ ನಾಡಿ ಮಿಡಿತ

Advertisement

ಬಳ್ಕುಂಜೆ: ಮಹಿಳಾ ಹಾಲು ಉತ್ಪಾದಕರ ಸಂಘದಲ್ಲಿ ಕಂಪ್ಯೂಟರ್ ಕಳವು!!

ಮುಲ್ಕಿ: ಇಲ್ಲಿಗೆ ಸಮೀಪದ ಬಳ್ಕುಂಜೆ ಮಹಿಳಾ ಹಾಲು ಉತ್ಪಾದಕರ ಸಂಘದಿಂದ ಕಳ್ಳರು ಕಂಪ್ಯೂಟರ್ ಕಳವು ಮಾಡಿದ್ದಾರೆ.
ಕಳ್ಳರು ಹಾಲು ಉತ್ಪಾದಕರ ಸಂಘದ ಹಿಂಭಾಗದ ಕಿಟಕಿಯ ಕಬ್ಬಿಣದ ಸರಳು ತುಂಡರಿಸಿ ಒಳಭಾಗಕ್ಕೆ ಬಂದು ಕ್ಯಾಷ್ ಡ್ರಾವರ್ ಜಾಲಾಡಿ ಚೆಲ್ಲಾಪಿಲ್ಲಿ ಮಾಡಿದ್ದಾರೆ.
ಬಳಿಕ ಡ್ರಾವರ್ ಮೇಲಿದ್ದ ಕಂಪ್ಯೂಟರ್ ಕಳ್ಳತನ ಮಾಡಿದ್ದಾರೆ .ಹೊರ ಹೋಗುವಾಗ ಎದುರಿನ ಬಾಗಿಲಿನ ಬದಿಯಲ್ಲಿ ಕಬ್ಬಿಣದ ಸೆಟರ್ ಹಾಕಿರುವ ಸಣ್ಣ ಕಿಟಿಕಿಯ ಒಳ ಭಾಗದ ಚಿಲಕ ತೆಗೆದು ಪರಾರಿಯಾಗಿದ್ದಾರೆ.


ಇದು ಎರಡನೇ ಬಾರಿ ಹಾಲಿನ ಸೊಸೈಟಿಯಲ್ಲಿ ಕಳ್ಳತನ ನಡೆದಿದೆ, ಕಳೆದ ವರ್ಷ ಸುಮಾರು ನಾಲ್ಕು ಸಾವಿರದಷ್ಟು ಹಣವನ್ನು ಇದೇ ಮಾದರಿಯಲ್ಲಿ ಕಳ್ಳತನ ಮಾಡಲಾಗಿತ್ತು ಎಂದು ಸೊಸೈಟಿ ಕಾರ್ಯದರ್ಶಿ ವನಿತಾ ಮಾಹಿತಿ ನೀಡಿದ್ದಾರೆ. ಯಾರೋ ಗೊತ್ತಿದ್ದವರೇ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದ್ದು ಸಮೀಪದ ಅಂಗನವಾಡಿಯ ಬೀಗ ಮುರಿದು ಒಳಹೊಕ್ಕ ಕಳ್ಳರು ಏನು ಸಿಗದೆ ವಾಪಾಸಾಗಿದ್ದಾರೆ.
ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!