ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ವಿಟ್ಲ ಠಾಣಾ ಎಸ್.ಐ. ಕೌಶಿಕ್ ಬಿ.ಸಿ. ಕರ್ತವ್ಯದಿಂದ ಅಮಾನತು

ಜುಗಾರಿ ಅಡ್ಡೆಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಳ್ಳದೆ ಹಣದ ಬೇಡಿಕೆ ಒಡ್ಡಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣಾ ಎಸ್.ಐ. ಕೌಶಿಕ್ ಬಿ.ಸಿ.ರವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಮೇ.8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧಾರದಲ್ಲಿ ಠಾಣಾ ಎಸ್.ಐ. ಕೌಶಿಕ್ ಬಿ. ಕೌಶಿಕ್ ಬಿ ಸಿ,ರವರು ದಾಳಿ ನಡೆಸಿದ್ರು. ಈ ವೇಳೆ ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗಿದ್ರು, ಮಾತ್ರವಲ್ಲದೆ ಸ್ಥಳದಲ್ಲಿ ಮೋಟಾರು ಸೈಕಲ್ ಕಂಡು ಬಂದಿತ್ತು. ಆರೋಪಿಗಳ ಸಹಿತ ಸೊತ್ತನ್ನು ವಶಕ್ಕೆ ಪಡೆದು ಕೊಳ್ಳಬೇಕಿದ್ದ ಎಸ್.ಐ. ಕೌಶಿಕ್‌ರವರು ಈ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳದೇ ಬೈಕ್ ಮಾಲಕನಿಗೆ ಕರೆಮಾಡಿ ಠಾಣೆಗೆ ಬರಮಾಡಿಕೊಂಡಿದ್ದಾರೆ. ಬಳಿಕ ಬೈಕ್ ಮಾಲಿಕನಿಗೆ ಮೂರನೇ ವ್ಯಕ್ತಿಯ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ಬೇಡಿಕೆಯಿಟ್ಟಿರುವ ಸಂಭಾಷಣೆಯು ಸಾಮಾಜಿಕ ಜಾಲತಾಣದ ಮೂಲಕ ಪ್ರಸಾರವಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಎಸ್.ಐ. ಕೌಶಿಕ್ ರವರ ಮೇಲೆ ಮೇ.12ರಂದು ಇಲಾಖಾ ಶಿಸ್ತು ಕ್ರಮ ಬಾಕಿಯಿರುವಂತೆ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!