ಜುಗಾರಿ ಅಡ್ಡೆಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಳ್ಳದೆ ಹಣದ ಬೇಡಿಕೆ ಒಡ್ಡಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣಾ ಎಸ್.ಐ. ಕೌಶಿಕ್ ಬಿ.ಸಿ.ರವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಮೇ.8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧಾರದಲ್ಲಿ ಠಾಣಾ ಎಸ್.ಐ. ಕೌಶಿಕ್ ಬಿ. ಕೌಶಿಕ್ ಬಿ ಸಿ,ರವರು ದಾಳಿ ನಡೆಸಿದ್ರು. ಈ ವೇಳೆ ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗಿದ್ರು, ಮಾತ್ರವಲ್ಲದೆ ಸ್ಥಳದಲ್ಲಿ ಮೋಟಾರು ಸೈಕಲ್ ಕಂಡು ಬಂದಿತ್ತು. ಆರೋಪಿಗಳ ಸಹಿತ ಸೊತ್ತನ್ನು ವಶಕ್ಕೆ ಪಡೆದು ಕೊಳ್ಳಬೇಕಿದ್ದ ಎಸ್.ಐ. ಕೌಶಿಕ್ರವರು ಈ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳದೇ ಬೈಕ್ ಮಾಲಕನಿಗೆ ಕರೆಮಾಡಿ ಠಾಣೆಗೆ ಬರಮಾಡಿಕೊಂಡಿದ್ದಾರೆ. ಬಳಿಕ ಬೈಕ್ ಮಾಲಿಕನಿಗೆ ಮೂರನೇ ವ್ಯಕ್ತಿಯ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ಬೇಡಿಕೆಯಿಟ್ಟಿರುವ ಸಂಭಾಷಣೆಯು ಸಾಮಾಜಿಕ ಜಾಲತಾಣದ ಮೂಲಕ ಪ್ರಸಾರವಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಎಸ್.ಐ. ಕೌಶಿಕ್ ರವರ ಮೇಲೆ ಮೇ.12ರಂದು ಇಲಾಖಾ ಶಿಸ್ತು ಕ್ರಮ ಬಾಕಿಯಿರುವಂತೆ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…