ಜನ ಮನದ ನಾಡಿ ಮಿಡಿತ

ವಿಮಾನ ದುರಂತದಲ್ಲಿ ಜೀವ ಕಳೆದುಕೊಂಡ ಕುಟುಂಬಕ್ಕೆ ತಲಾ ಒಂದು ಕೋಟಿ ಪರಿಹಾರ ಘೋಷಣೆ

ಅಹ್ಮದಾಬಾದ್‌ನ ಸರ್ದಾರ್ ವಲ್ಲಭ್ ಭಾಯ್ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು ಈ ವಿಮಾನದಲ್ಲಿ ಸುಮಾರು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಆದರೆ ಈ ದುರಂತದಲ್ಲಿ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿರುವ ಮಾಹಿತಿ ಲಭ್ಯ ಆಗಿದೆ.

ಇನ್ನು, ಟಾಟಾ ಗ್ರೂಪ್, ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ದುಃಖ ವ್ಯಕ್ತಪಡಿಸಿದ್ದು, ಇದರಲ್ಲಿ ಜೀವ ಕಳೆದುಕೊಂಡ ಎಲ್ಲಾ ಕುಟುಂಬಕ್ಕೆ ತಲಾ ಒಂದು ಕೋಟಿ ಪರಿಹಾರ ಘೋಷಣೆ ಮಾಡಿದೆ. ಗ್ರೂಪ್ ಅಧ್ಯಕ್ಷ ಎನ್.ಚಂದ್ರಶೇಖರನ್ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಏರ್ ಇಂಡಿಯಾ ಫ್ಲೈಟ್-171 ದುರಂತದಿAದ ತೀವ್ರ ನೋವಾಗಿದೆ. ತಮ್ಮ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ.

ಇನ್ನು ಟಾಟಾ ಗ್ರೂಪ್ ಸಂತ್ರಸ್ತ ಪ್ರತಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದೆ. ಅಗತ್ಯ ಆರೈಕೆ ಮತ್ತು ಸಹಾಯವನ್ನು ಖಚಿತಪಡಿಸುವುದರ ಜೊತೆಗೆ ವೈದ್ಯಕೀಯ ವೆಚ್ಚವನ್ನೂ ಭರಿಸುವುದಾಗಿ ಟಾಟಾ ಗ್ರೂಪ್ ತಿಳಿಸಿದೆ. ಜೊತೆಗೆ ಬಿಜೆ ಮೆಡಿಕಲ್‌ನ ಹಾಸ್ಟೆಲ್ ನಿರ್ಮಾಣಕ್ಕೂ ಸಹಾಯ ನೀಡಲಾಗುವುದು ಎಂದು ತಿಳಿಸಿದೆ.

Leave a Reply

Your email address will not be published. Required fields are marked *

“ಕೊನೆ ಪಯಣ”…….

ವಿಮಾನ ದುರಂತದ ಬಗ್ಗೆ ವಿಶ್ವಾಸ್ ಕುಮಾರ್ ಹೇಳಿದ ಅಚ್ಚರಿ ಸಂಗತಿ

ದುಬೈ: ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿಯನ್ನು ಸ್ವೀಕರಿಸಲಿರುವ ಕಾಸರಗೋಡು ಶ್ರೀಯುತ ಸುಬ್ರಾಯ ಹೊಳ್ಳರು 

ಮಂಗಳೂರು: ವಿಶೇಷ ಕಾರ್ಯಪಡೆ ಘಟಕ ಲೋಕಾರ್ಪಣೆಗೊಳಿಸಿದ ಡಾ.ಜಿ.ಪರಮೇಶ್ವರ್

ಉಡುಪಿ: ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೃತಕ ನೆರೆ ಸೃಷ್ಟಿ…!

ಮಂಗಳೂರು: ವಿಮಾನ ಪತನ ;ಮಂಗಳೂರು ಮೂಲದ ಸಹ ಪೈಲಟ್ ಕ್ಯಾ. ಕ್ಲೈವ್ ಕುಂದರ್ ಸಾವು

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ!!!

ಕುತ್ತಾರು: 12 ನೇ ಮಹಡಿಯಿಂದ ಬಿದ್ದು ಬಾಲಕಿ ಮೃತ್ಯು

ಪತ್ನಿಯನ್ನು ಕರೆತರಲು ಲಂಡನ್‌ಗೆ ಹೊರಟ್ಟಿದ್ದ ಮಾಜಿ ಸಿಎಂ ವಿಜಯ್ ರೂಪಾನಿ ದುರಂತ ಅಂತ್ಯ

error: Content is protected !!