ಅಹ್ಮದಾಬಾದ್ನ ಸರ್ದಾರ್ ವಲ್ಲಭ್ ಭಾಯ್ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು ಈ ವಿಮಾನದಲ್ಲಿ ಸುಮಾರು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಆದರೆ ಈ ದುರಂತದಲ್ಲಿ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿರುವ ಮಾಹಿತಿ ಲಭ್ಯ ಆಗಿದೆ.
ಇನ್ನು, ಟಾಟಾ ಗ್ರೂಪ್, ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ದುಃಖ ವ್ಯಕ್ತಪಡಿಸಿದ್ದು, ಇದರಲ್ಲಿ ಜೀವ ಕಳೆದುಕೊಂಡ ಎಲ್ಲಾ ಕುಟುಂಬಕ್ಕೆ ತಲಾ ಒಂದು ಕೋಟಿ ಪರಿಹಾರ ಘೋಷಣೆ ಮಾಡಿದೆ. ಗ್ರೂಪ್ ಅಧ್ಯಕ್ಷ ಎನ್.ಚಂದ್ರಶೇಖರನ್ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಏರ್ ಇಂಡಿಯಾ ಫ್ಲೈಟ್-171 ದುರಂತದಿAದ ತೀವ್ರ ನೋವಾಗಿದೆ. ತಮ್ಮ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ.
ಇನ್ನು ಟಾಟಾ ಗ್ರೂಪ್ ಸಂತ್ರಸ್ತ ಪ್ರತಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದೆ. ಅಗತ್ಯ ಆರೈಕೆ ಮತ್ತು ಸಹಾಯವನ್ನು ಖಚಿತಪಡಿಸುವುದರ ಜೊತೆಗೆ ವೈದ್ಯಕೀಯ ವೆಚ್ಚವನ್ನೂ ಭರಿಸುವುದಾಗಿ ಟಾಟಾ ಗ್ರೂಪ್ ತಿಳಿಸಿದೆ. ಜೊತೆಗೆ ಬಿಜೆ ಮೆಡಿಕಲ್ನ ಹಾಸ್ಟೆಲ್ ನಿರ್ಮಾಣಕ್ಕೂ ಸಹಾಯ ನೀಡಲಾಗುವುದು ಎಂದು ತಿಳಿಸಿದೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…