ಅಹ್ಮದಾಬಾದ್ನ ಟ್ರಾಫಿಕ್ನಲ್ಲಿ ಸಿಲುಕಿ ಲಂಡನ್ ವಿಮಾನ ತಪ್ಪಿಸಿಕೊಂಡ ಮಹಿಳೆಯೊಬ್ಬರು ಸಾವಿನಿಂದ ಪಾರಾಗಿದ್ದಾರೆ. ಅವರು ಹತ್ತಬೇಕಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ವಿಮಾನ ತಪ್ಪಿದ್ದಕ್ಕೆ ನಿರಾಸೆಗೊಂಡಿದ್ದ ಭೂಮಿ, ಇದೀಗ ಇದೇ ತನ್ನ ಜೀವ ಉಳಿಸಿದೆ ಎಂದು ದೇವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇನ್ನು ಟ್ರಾಫಿಕ್ ಅನ್ನು ದಿನನಿತ್ಯ ನಾವು ಬೈತಾ ಇರ್ತೀವಿ.. ಜಾಮ್ ಆದ್ರೆ ಸರಿಯಾದ ಸಮಯಕ್ಕೆ ಹೋಗಿ ತಲುಪೋದಕ್ಕೆ ಆಗಲ್ಲ.. ಟ್ರಾಫಿಕ್ನಲ್ಲಿ ಸಿಲುಕಿದ್ರೆ ಜೀವ ಹೋಗುತ್ತೆ ಅಂತ ಗೊಣಗಾಡ್ತೀವಿ. ಟ್ರಾಫಿಕ್ ಜಾಮ್ ಅಂತ ಬೈಕೊಳ್ತಿದ್ದ ಮಹಿಳೆಗೆ.. ಅದೇ ಟ್ರಾಫಿಕ್ ಈಗ ಜೀವ ಉಳಿಸಿದೆ.
ಅಹ್ಮದಾಬಾದ್ನ ಭಾರೀ ಟ್ರಾಫಿಕ್ನಲ್ಲಿ ಸಿಲುಕಿದ್ದ ಭೂಮಿ ಚೌಹಾಣ್ಗೆ.. ತಾವು ಹತ್ತಬೇಕಿದ್ದ ಲಂಡನ್ ವಿಮಾನ ತಪ್ಪಿಹೋಗುತ್ತದೆಯೇನೋ ಎಂಬ ಆತಂಕ, ಚಡಪಡಿಕೆ ಇತ್ತು. ಎರಡು ವರ್ಷಗಳ ನಂತರ ಭಾರತಕ್ಕೆ ಬಂದು.. ಮತ್ತೆ ಲಂಡನ್ನಲ್ಲಿರುವ ಪತಿಯನ್ನ ಸೇರಬೇಕೆಂಬ ತವಕದಲ್ಲಿದ್ದ ಅವರಿಗೆ, ಆ ಟ್ರಾಫಿಕ್ ತೀವ್ರ ಕಿರಿಕಿರಿ ಎನಿಸಿತ್ತು. ಕೊನೆಗೂ ಏರ್ಪೋರ್ಟ್ ತಲುಪಿದಾಗ ತಿಳಿಯಿತು. ಅವರು ಹತ್ತಬೇಕಿದ್ದ ಏರ್ ಇಂಡಿಯಾ ವಿಮಾನ ಎಐ-171 ಟೇಕಾಫ್ ಆಗಿದೆ. ಈ ವಿಚಾರ ಅವರಿಗೆ ಭಾರೀ ನಿರಾಸೆ ತಂದಿತ್ತು.. ಆದರೆ, ಕೆಲವೇ ಗಂಟೆಗಳಲ್ಲಿ ಆ ಹತಾಶೆ, ಅವರ ಪಾಲಿಗೆ ಭಯಾನಕ ಆಘಾತವಾಗಿ ಬದಲಾಯಿತು. ಅವರು ಹತ್ತಬೇಕಿದ್ದ ವಿಮಾನ ಟೇಕಾಫ್ ಆದ ಐದೇ ನಿಮಿಷದಲ್ಲಿ ಪತನಗೊಂಡು, ಅದರಲ್ಲಿ ಪ್ರಯಾಣಿಸುತ್ತಿದ್ದ 241 ಜನರಲ್ಲಿ ಬಹುತೇಕರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ತಿಳಿದು ಒಂದು ಕ್ಷಣ ಮಹಿಳೆ ದಿಕ್ಕೆ ತೋಚದಂತೆ ಮೌನಕ್ಕೆ ಶರಣಾಗಿದ್ದಾರೆ. ಇನ್ನು ಟ್ರಾಫಿಕ್ನಿಂದ ಲೇಟ್ ಆಗಿದ್ದಕ್ಕೆ ವಿಮಾನ ಮಿಸ್ ಆಗಿ ಬೇಸರಗೊಂಡಿದ್ದ ಭೂಮಿ ಚೌಹಾಣ್, ಟ್ರಾಫಿಕ್ಕಿನಿಂದಲೇ ಜೀವದಾನ ಸಿಕ್ಕಿದೆ. ನನ್ನ ಗಣಪತಿ ಬಪ್ಪಾ ನನ್ನನ್ನ ಉಳಿಸಿದ ಎನ್ನುವಾಗ ಅವರ ದನಿಯಲ್ಲಿ ಕೃತಜ್ಞತಾ ಭಾವ ಕಾಣ್ತಿತ್ತು. ಆದ್ರೆ ಇದೇ ಅದೃಷ್ಟ ಉಳಿದವರಿಗೆ ಇರಲಿಲ್ಲ ಅನ್ನೋದೇ ನೋವಿನ ಸಂಗತಿಯಾಗಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…