ಜನ ಮನದ ನಾಡಿ ಮಿಡಿತ

Advertisement

ಪತ್ನಿಯನ್ನು ಕರೆತರಲು ಲಂಡನ್‌ಗೆ ಹೊರಟ್ಟಿದ್ದ ಮಾಜಿ ಸಿಎಂ ವಿಜಯ್ ರೂಪಾನಿ ದುರಂತ ಅಂತ್ಯ

ಏರ್ ಇಂಡಿಯಾ ವಿಮಾನ ಪತನ ಅದೆಷ್ಟೋ ಕುಟುಂಬಗಳ ನಗುವನ್ನ ಕಸಿದುಕೊಂಡಿದೆ ಪ್ರಯಾಣಿಕರ ಮೇಲೆ ಬಿದ್ದ ಬೆಂಕಿ ತಮ್ಮವರನ್ನ ಕಳೆದುಕೊಂಡ ನೋವಿನ ಕಣ್ಣೀರಿಗೆ ಕಾರಣವಾಗಿದೆ. ಹೀಗೆ ಕಣ್ಣೀರಲ್ಲಿ ಮರುಗಿತ್ತಿರುವ ಜನರ ಪೈಕಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕುಟುಂಬ ಕೂಡ ಒಂದು.

ಲಂಡನ್‌ಗೆ ತೆರಳೋದಕ್ಕೆ ಅಂತ ಏರ್ ಇಂಡಿಯಾ ಫ್ಲೈಟ್? ಏರಿದ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ದುರಂತ ಅಂತ್ಯ ಕಂಡಿದ್ದಾರೆ. ಲಂಡನ್‌ನಲ್ಲಿರುವ ಮಗಳ ಮನೆಯಲ್ಲಿದ್ದ ತಮ್ಮ ಪತ್ನಿಯನ್ನು ಕರೆತರಲು ವಿಜಯ್ ರೂಪಾನಿ ಏರ್ ಇಂಡಿಯಾ 171 ವಿಮಾನದಲ್ಲಿ ಲಂಡನ್‌ಗೆ ಹೊರಟ್ಟಿದ್ದರು.. ವಿಮಾನದೊಳಗೆ ಮಹಿಳೆಯೊಬ್ಬರು ಮಾಜಿ ಸಿಎಂ ವಿಜಯ್ ರೂಪಾನಿಯವರನ್ನು ನೋಡಿದ ಖುಷಿಯಲ್ಲಿ ಸೆಲ್ಫಿ ತೆಗೆದುಕೊಂಡಿದ್ದಾರೆ.

ದುರಂತ ಅಂದ್ರೆ ಇದೇ ಅವರ ಕೊನೆಯ ಫೋಟೋ ಆಗಿದೆ. ವಿಜಯ್ ರೂಪಾನಿಯವರ ಸಾವು ಖಚಿತವಾಗ್ತಿದ್ದಂತೆ ಅವರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿಯವರ ದುರ್ಮರಣಕ್ಕೆ ಬಿಜೆಪಿ ನಾಯಕರು ಸಂತಾಪವನ್ನು ಸೂಚಿಸಿದ್ದಾರೆ. ರೂಪಾನಿಯವರ ಕಿರಿಯ ಮಗ. ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಈಗ ವಿಜಯ್ ರೂಪಾನಿ ವಿಮಾನ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದು ಇದೀಗ ಅವರ ಕುಟುಂಬಕ್ಕೆ ತೀವ್ರ ನೋವನ್ನು ಉಂಟುಮಾಡಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!