ಏರ್ ಇಂಡಿಯಾ ವಿಮಾನ ಪತನ ಅದೆಷ್ಟೋ ಕುಟುಂಬಗಳ ನಗುವನ್ನ ಕಸಿದುಕೊಂಡಿದೆ ಪ್ರಯಾಣಿಕರ ಮೇಲೆ ಬಿದ್ದ ಬೆಂಕಿ ತಮ್ಮವರನ್ನ ಕಳೆದುಕೊಂಡ ನೋವಿನ ಕಣ್ಣೀರಿಗೆ ಕಾರಣವಾಗಿದೆ. ಹೀಗೆ ಕಣ್ಣೀರಲ್ಲಿ ಮರುಗಿತ್ತಿರುವ ಜನರ ಪೈಕಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕುಟುಂಬ ಕೂಡ ಒಂದು.
ಲಂಡನ್ಗೆ ತೆರಳೋದಕ್ಕೆ ಅಂತ ಏರ್ ಇಂಡಿಯಾ ಫ್ಲೈಟ್? ಏರಿದ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ದುರಂತ ಅಂತ್ಯ ಕಂಡಿದ್ದಾರೆ. ಲಂಡನ್ನಲ್ಲಿರುವ ಮಗಳ ಮನೆಯಲ್ಲಿದ್ದ ತಮ್ಮ ಪತ್ನಿಯನ್ನು ಕರೆತರಲು ವಿಜಯ್ ರೂಪಾನಿ ಏರ್ ಇಂಡಿಯಾ 171 ವಿಮಾನದಲ್ಲಿ ಲಂಡನ್ಗೆ ಹೊರಟ್ಟಿದ್ದರು.. ವಿಮಾನದೊಳಗೆ ಮಹಿಳೆಯೊಬ್ಬರು ಮಾಜಿ ಸಿಎಂ ವಿಜಯ್ ರೂಪಾನಿಯವರನ್ನು ನೋಡಿದ ಖುಷಿಯಲ್ಲಿ ಸೆಲ್ಫಿ ತೆಗೆದುಕೊಂಡಿದ್ದಾರೆ.
ದುರಂತ ಅಂದ್ರೆ ಇದೇ ಅವರ ಕೊನೆಯ ಫೋಟೋ ಆಗಿದೆ. ವಿಜಯ್ ರೂಪಾನಿಯವರ ಸಾವು ಖಚಿತವಾಗ್ತಿದ್ದಂತೆ ಅವರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಗುಜರಾತ್ನ ಮಾಜಿ ಸಿಎಂ ವಿಜಯ್ ರೂಪಾನಿಯವರ ದುರ್ಮರಣಕ್ಕೆ ಬಿಜೆಪಿ ನಾಯಕರು ಸಂತಾಪವನ್ನು ಸೂಚಿಸಿದ್ದಾರೆ. ರೂಪಾನಿಯವರ ಕಿರಿಯ ಮಗ. ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಈಗ ವಿಜಯ್ ರೂಪಾನಿ ವಿಮಾನ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದು ಇದೀಗ ಅವರ ಕುಟುಂಬಕ್ಕೆ ತೀವ್ರ ನೋವನ್ನು ಉಂಟುಮಾಡಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…