ಏರ್ ಇಂಡಿಯಾ ವಿಮಾನ ಪತನ ಅದೆಷ್ಟೋ ಕುಟುಂಬಗಳ ನಗುವನ್ನ ಕಸಿದುಕೊಂಡಿದೆ ಪ್ರಯಾಣಿಕರ ಮೇಲೆ ಬಿದ್ದ ಬೆಂಕಿ ತಮ್ಮವರನ್ನ ಕಳೆದುಕೊಂಡ ನೋವಿನ ಕಣ್ಣೀರಿಗೆ ಕಾರಣವಾಗಿದೆ. ಹೀಗೆ ಕಣ್ಣೀರಲ್ಲಿ ಮರುಗಿತ್ತಿರುವ ಜನರ ಪೈಕಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕುಟುಂಬ ಕೂಡ ಒಂದು.
ಲಂಡನ್ಗೆ ತೆರಳೋದಕ್ಕೆ ಅಂತ ಏರ್ ಇಂಡಿಯಾ ಫ್ಲೈಟ್? ಏರಿದ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ದುರಂತ ಅಂತ್ಯ ಕಂಡಿದ್ದಾರೆ. ಲಂಡನ್ನಲ್ಲಿರುವ ಮಗಳ ಮನೆಯಲ್ಲಿದ್ದ ತಮ್ಮ ಪತ್ನಿಯನ್ನು ಕರೆತರಲು ವಿಜಯ್ ರೂಪಾನಿ ಏರ್ ಇಂಡಿಯಾ 171 ವಿಮಾನದಲ್ಲಿ ಲಂಡನ್ಗೆ ಹೊರಟ್ಟಿದ್ದರು.. ವಿಮಾನದೊಳಗೆ ಮಹಿಳೆಯೊಬ್ಬರು ಮಾಜಿ ಸಿಎಂ ವಿಜಯ್ ರೂಪಾನಿಯವರನ್ನು ನೋಡಿದ ಖುಷಿಯಲ್ಲಿ ಸೆಲ್ಫಿ ತೆಗೆದುಕೊಂಡಿದ್ದಾರೆ.
ದುರಂತ ಅಂದ್ರೆ ಇದೇ ಅವರ ಕೊನೆಯ ಫೋಟೋ ಆಗಿದೆ. ವಿಜಯ್ ರೂಪಾನಿಯವರ ಸಾವು ಖಚಿತವಾಗ್ತಿದ್ದಂತೆ ಅವರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಗುಜರಾತ್ನ ಮಾಜಿ ಸಿಎಂ ವಿಜಯ್ ರೂಪಾನಿಯವರ ದುರ್ಮರಣಕ್ಕೆ ಬಿಜೆಪಿ ನಾಯಕರು ಸಂತಾಪವನ್ನು ಸೂಚಿಸಿದ್ದಾರೆ. ರೂಪಾನಿಯವರ ಕಿರಿಯ ಮಗ. ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಈಗ ವಿಜಯ್ ರೂಪಾನಿ ವಿಮಾನ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದು ಇದೀಗ ಅವರ ಕುಟುಂಬಕ್ಕೆ ತೀವ್ರ ನೋವನ್ನು ಉಂಟುಮಾಡಿದೆ.
ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆಯ ಹಿಂಭಾಗದ ಖಾಸಗಿ ಸ್ಥಳದಲ್ಲಿದ್ದರುವ ಪಾಳುಬಾವಿಯಲ್ಲಿ ಕೊಳೆತಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮೃತದೇಹ…
ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ…
ಮುಂಡತಿಕ್ಕೋಡುವಿನ ಪಟಾಕಿ ಸಂಗ್ರಹಣಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 14 ಜನರು ಸಾವನ್ನಪ್ಪಿದ ನಂತರ, ತ್ರಿಶೂರ್ ಪೂರಂ ಉತ್ಸವದ ಪಟಾಕಿ…
ಅಚಾನಕ್ ಆಗಿ ಸುರಿದ ಧಾರಾಕಾರ ಮಳೆಯಿಂದಾಗಿ ಮಂಗಳೂರಿನ ಅತ್ತಾವರ ಬಳಿಯ ಅಯಪ್ಪ ಮಂದಿರದ ಮುಂಭಾಗ ತಡೆಗೋಡೆ ಕುಸಿದು ಬಿದ್ದ ಕಾರಣ…
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.…
ಕಾವಳಪಡೂರು ಗ್ರಾಮದ ಬರ್ಕಟ ಎಂಬಲ್ಲಿ ಪೋಲೀಸ್ ಇಲಾಖೆಯ ಕಚೇರಿ ನಿರ್ಮಾಣಕ್ಕೆ ಮೀಸಲು ಇರಿಸಲಾಗಿದ್ದ ಜಾಗವನ್ನು ಪೋಲೀಸ್ ಮಹಾನಿರ್ದೇಶಕ ಸಲೀಂ ಅವರು…