ಏರ್ ಇಂಡಿಯಾ ವಿಮಾನ ಪತನ ಅದೆಷ್ಟೋ ಕುಟುಂಬಗಳ ನಗುವನ್ನ ಕಸಿದುಕೊಂಡಿದೆ ಪ್ರಯಾಣಿಕರ ಮೇಲೆ ಬಿದ್ದ ಬೆಂಕಿ ತಮ್ಮವರನ್ನ ಕಳೆದುಕೊಂಡ ನೋವಿನ ಕಣ್ಣೀರಿಗೆ ಕಾರಣವಾಗಿದೆ. ಹೀಗೆ ಕಣ್ಣೀರಲ್ಲಿ ಮರುಗಿತ್ತಿರುವ ಜನರ ಪೈಕಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕುಟುಂಬ ಕೂಡ ಒಂದು.
ಲಂಡನ್ಗೆ ತೆರಳೋದಕ್ಕೆ ಅಂತ ಏರ್ ಇಂಡಿಯಾ ಫ್ಲೈಟ್? ಏರಿದ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ದುರಂತ ಅಂತ್ಯ ಕಂಡಿದ್ದಾರೆ. ಲಂಡನ್ನಲ್ಲಿರುವ ಮಗಳ ಮನೆಯಲ್ಲಿದ್ದ ತಮ್ಮ ಪತ್ನಿಯನ್ನು ಕರೆತರಲು ವಿಜಯ್ ರೂಪಾನಿ ಏರ್ ಇಂಡಿಯಾ 171 ವಿಮಾನದಲ್ಲಿ ಲಂಡನ್ಗೆ ಹೊರಟ್ಟಿದ್ದರು.. ವಿಮಾನದೊಳಗೆ ಮಹಿಳೆಯೊಬ್ಬರು ಮಾಜಿ ಸಿಎಂ ವಿಜಯ್ ರೂಪಾನಿಯವರನ್ನು ನೋಡಿದ ಖುಷಿಯಲ್ಲಿ ಸೆಲ್ಫಿ ತೆಗೆದುಕೊಂಡಿದ್ದಾರೆ.
ದುರಂತ ಅಂದ್ರೆ ಇದೇ ಅವರ ಕೊನೆಯ ಫೋಟೋ ಆಗಿದೆ. ವಿಜಯ್ ರೂಪಾನಿಯವರ ಸಾವು ಖಚಿತವಾಗ್ತಿದ್ದಂತೆ ಅವರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಗುಜರಾತ್ನ ಮಾಜಿ ಸಿಎಂ ವಿಜಯ್ ರೂಪಾನಿಯವರ ದುರ್ಮರಣಕ್ಕೆ ಬಿಜೆಪಿ ನಾಯಕರು ಸಂತಾಪವನ್ನು ಸೂಚಿಸಿದ್ದಾರೆ. ರೂಪಾನಿಯವರ ಕಿರಿಯ ಮಗ. ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಈಗ ವಿಜಯ್ ರೂಪಾನಿ ವಿಮಾನ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದು ಇದೀಗ ಅವರ ಕುಟುಂಬಕ್ಕೆ ತೀವ್ರ ನೋವನ್ನು ಉಂಟುಮಾಡಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…