ಜನ ಮನದ ನಾಡಿ ಮಿಡಿತ

Advertisement

ವಿಮಾನ ದುರಂತದ ಬಗ್ಗೆ ವಿಶ್ವಾಸ್ ಕುಮಾರ್ ಹೇಳಿದ ಅಚ್ಚರಿ ಸಂಗತಿ

ವಿಶ್ವಾಸ್ ಕುಮಾರ್ ರಮೇಶ್ ಅನ್ನೋರು ಅಹ್ಮದಾಬಾದ್ ವಿಮಾನ ದುರಂತದಿ0ದ ಪವಾಡ ಸದೃಶ ರೀತಿಯಲ್ಲಿ ಪಾರಾಗಿ ಬಂದಿದ್ದಾರೆ.

ಸದ್ಯ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಪ್ರಧಾನಿ ನರೇಂದ್ರ ಮೋದಿಯವರು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಾರೆ. ಈ ವೇಳೆ ಘೋರ ದರಂತಕ್ಕೆ ಸಿಲುಕಿ ಕೂದಲೆಳೆ ಅಂತರದಲ್ಲಿ ಜೀವ ಅಪಾಯದಿಂದ ಪಾರಾದ ವಿಶ್ವಾಸ್ ಕುಮಾರ್ ರಮೇಶ್ ಅವರು, ತಮ್ಮ ಅನುಭವಗಳನ್ನು ಹಂಚಿಕೊಳ್ತಿದ್ದಾರೆ. ದೂರದರ್ಶನ ವಾಹಿನಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು ಈ ಅಪಾಯದಿಂದ ಹೇಗೆ ಜೀವಂತವಾಗಿ ಬಂದೆ ಅನ್ನೋದೇ ಗೊತ್ತಿಲ್ಲ. ವಿಮಾನವು ಟೇಕ್ ಆಫ್ ಆದ ತಕ್ಷಣ ಸ್ಟಕ್ ಆದಂತೆ ಭಾಸವಾಯಿತು.

ನಂತರ ಗ್ರೀನ್ ಮತ್ತು ವೈಟ್ ಲೈಟ್ ಆನ್ ಆಗಿದೆ. ಪೈಲಟ್‌ಗಳು ನಿಯಂತ್ರಣ ಸಾಧಿಸಿ ವಿಮಾನವನ್ನು ಮೇಲಕ್ಕೆ ಕೊಂಡೊಯ್ಯಲು ಪ್ರಯತ್ನಿಸಿದರು. ಆದರೆ ವೇಗದಿಂದ ವಿಮಾನ ಪತನಗೊಂಡಿದೆ. ಇನ್ನೇನು ನಾನು ಸಾಯುತ್ತೇನೆ ಅನ್ಕೊಂಡೆ. ಆದರೆ ನಾನು ಕಣ್ಣು ತೆರೆದಾಗ, ನಾನು ಬದುಕಿರೋದನ್ನು ನೋಡಿದೆ. ನಾನು ನನ್ನ ಸೀಟ್ ಬೆಲ್ಟ್ ತೆರೆದು ಹೊರಬಂದೆ ಆದರೆ ನನ್ನ ಕಣ್ಣೆದುರಲ್ಲೇ ಅಂಕಲ್, ಆಂಟಿ ಹಾಗೂ ಗಗನಸಖಿಯರು ಪ್ರಾಣಬಿಟ್ಟರು. ನಾನು ಭೂಮಿಯ ಹತ್ತಿರಕ್ಕೆ ಬಿದ್ದಿದೆ. ಅದು ಗ್ರೌಂಡ್ ಫ್ಲೋರ್‌ನಲ್ಲಿ ಜಾಗವಿತ್ತು. ಅಲ್ಲಿಂದ ನಾನು ಹೊರಬಂದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!