ವಿಶ್ವಾಸ್ ಕುಮಾರ್ ರಮೇಶ್ ಅನ್ನೋರು ಅಹ್ಮದಾಬಾದ್ ವಿಮಾನ ದುರಂತದಿ0ದ ಪವಾಡ ಸದೃಶ ರೀತಿಯಲ್ಲಿ ಪಾರಾಗಿ ಬಂದಿದ್ದಾರೆ.
ಸದ್ಯ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಪ್ರಧಾನಿ ನರೇಂದ್ರ ಮೋದಿಯವರು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಾರೆ. ಈ ವೇಳೆ ಘೋರ ದರಂತಕ್ಕೆ ಸಿಲುಕಿ ಕೂದಲೆಳೆ ಅಂತರದಲ್ಲಿ ಜೀವ ಅಪಾಯದಿಂದ ಪಾರಾದ ವಿಶ್ವಾಸ್ ಕುಮಾರ್ ರಮೇಶ್ ಅವರು, ತಮ್ಮ ಅನುಭವಗಳನ್ನು ಹಂಚಿಕೊಳ್ತಿದ್ದಾರೆ. ದೂರದರ್ಶನ ವಾಹಿನಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು ಈ ಅಪಾಯದಿಂದ ಹೇಗೆ ಜೀವಂತವಾಗಿ ಬಂದೆ ಅನ್ನೋದೇ ಗೊತ್ತಿಲ್ಲ. ವಿಮಾನವು ಟೇಕ್ ಆಫ್ ಆದ ತಕ್ಷಣ ಸ್ಟಕ್ ಆದಂತೆ ಭಾಸವಾಯಿತು.
ನಂತರ ಗ್ರೀನ್ ಮತ್ತು ವೈಟ್ ಲೈಟ್ ಆನ್ ಆಗಿದೆ. ಪೈಲಟ್ಗಳು ನಿಯಂತ್ರಣ ಸಾಧಿಸಿ ವಿಮಾನವನ್ನು ಮೇಲಕ್ಕೆ ಕೊಂಡೊಯ್ಯಲು ಪ್ರಯತ್ನಿಸಿದರು. ಆದರೆ ವೇಗದಿಂದ ವಿಮಾನ ಪತನಗೊಂಡಿದೆ. ಇನ್ನೇನು ನಾನು ಸಾಯುತ್ತೇನೆ ಅನ್ಕೊಂಡೆ. ಆದರೆ ನಾನು ಕಣ್ಣು ತೆರೆದಾಗ, ನಾನು ಬದುಕಿರೋದನ್ನು ನೋಡಿದೆ. ನಾನು ನನ್ನ ಸೀಟ್ ಬೆಲ್ಟ್ ತೆರೆದು ಹೊರಬಂದೆ ಆದರೆ ನನ್ನ ಕಣ್ಣೆದುರಲ್ಲೇ ಅಂಕಲ್, ಆಂಟಿ ಹಾಗೂ ಗಗನಸಖಿಯರು ಪ್ರಾಣಬಿಟ್ಟರು. ನಾನು ಭೂಮಿಯ ಹತ್ತಿರಕ್ಕೆ ಬಿದ್ದಿದೆ. ಅದು ಗ್ರೌಂಡ್ ಫ್ಲೋರ್ನಲ್ಲಿ ಜಾಗವಿತ್ತು. ಅಲ್ಲಿಂದ ನಾನು ಹೊರಬಂದೆ ಎಂದಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…