ವಿಶ್ವಾಸ್ ಕುಮಾರ್ ರಮೇಶ್ ಅನ್ನೋರು ಅಹ್ಮದಾಬಾದ್ ವಿಮಾನ ದುರಂತದಿ0ದ ಪವಾಡ ಸದೃಶ ರೀತಿಯಲ್ಲಿ ಪಾರಾಗಿ ಬಂದಿದ್ದಾರೆ.
ಸದ್ಯ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಪ್ರಧಾನಿ ನರೇಂದ್ರ ಮೋದಿಯವರು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಾರೆ. ಈ ವೇಳೆ ಘೋರ ದರಂತಕ್ಕೆ ಸಿಲುಕಿ ಕೂದಲೆಳೆ ಅಂತರದಲ್ಲಿ ಜೀವ ಅಪಾಯದಿಂದ ಪಾರಾದ ವಿಶ್ವಾಸ್ ಕುಮಾರ್ ರಮೇಶ್ ಅವರು, ತಮ್ಮ ಅನುಭವಗಳನ್ನು ಹಂಚಿಕೊಳ್ತಿದ್ದಾರೆ. ದೂರದರ್ಶನ ವಾಹಿನಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು ಈ ಅಪಾಯದಿಂದ ಹೇಗೆ ಜೀವಂತವಾಗಿ ಬಂದೆ ಅನ್ನೋದೇ ಗೊತ್ತಿಲ್ಲ. ವಿಮಾನವು ಟೇಕ್ ಆಫ್ ಆದ ತಕ್ಷಣ ಸ್ಟಕ್ ಆದಂತೆ ಭಾಸವಾಯಿತು.
ನಂತರ ಗ್ರೀನ್ ಮತ್ತು ವೈಟ್ ಲೈಟ್ ಆನ್ ಆಗಿದೆ. ಪೈಲಟ್ಗಳು ನಿಯಂತ್ರಣ ಸಾಧಿಸಿ ವಿಮಾನವನ್ನು ಮೇಲಕ್ಕೆ ಕೊಂಡೊಯ್ಯಲು ಪ್ರಯತ್ನಿಸಿದರು. ಆದರೆ ವೇಗದಿಂದ ವಿಮಾನ ಪತನಗೊಂಡಿದೆ. ಇನ್ನೇನು ನಾನು ಸಾಯುತ್ತೇನೆ ಅನ್ಕೊಂಡೆ. ಆದರೆ ನಾನು ಕಣ್ಣು ತೆರೆದಾಗ, ನಾನು ಬದುಕಿರೋದನ್ನು ನೋಡಿದೆ. ನಾನು ನನ್ನ ಸೀಟ್ ಬೆಲ್ಟ್ ತೆರೆದು ಹೊರಬಂದೆ ಆದರೆ ನನ್ನ ಕಣ್ಣೆದುರಲ್ಲೇ ಅಂಕಲ್, ಆಂಟಿ ಹಾಗೂ ಗಗನಸಖಿಯರು ಪ್ರಾಣಬಿಟ್ಟರು. ನಾನು ಭೂಮಿಯ ಹತ್ತಿರಕ್ಕೆ ಬಿದ್ದಿದೆ. ಅದು ಗ್ರೌಂಡ್ ಫ್ಲೋರ್ನಲ್ಲಿ ಜಾಗವಿತ್ತು. ಅಲ್ಲಿಂದ ನಾನು ಹೊರಬಂದೆ ಎಂದಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…