ವಿಶ್ವಾಸ್ ಕುಮಾರ್ ರಮೇಶ್ ಅನ್ನೋರು ಅಹ್ಮದಾಬಾದ್ ವಿಮಾನ ದುರಂತದಿ0ದ ಪವಾಡ ಸದೃಶ ರೀತಿಯಲ್ಲಿ ಪಾರಾಗಿ ಬಂದಿದ್ದಾರೆ.
ಸದ್ಯ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಪ್ರಧಾನಿ ನರೇಂದ್ರ ಮೋದಿಯವರು ಭೇಟಿಯಾಗಿ ಆರೋಗ್ಯ ವಿಚಾರಸಿದ್ದಾರೆ. ಈ ವೇಳೆ ಘೋರ ದರಂತಕ್ಕೆ ಸಿಲುಕಿ ಕೂದಲೆಳೆ ಅಂತರದಲ್ಲಿ ಜೀವ ಅಪಾಯದಿಂದ ಪಾರಾದ ವಿಶ್ವಾಸ್ ಕುಮಾರ್ ರಮೇಶ್ ಅವರು, ತಮ್ಮ ಅನುಭವಗಳನ್ನು ಹಂಚಿಕೊಳ್ತಿದ್ದಾರೆ. ದೂರದರ್ಶನ ವಾಹಿನಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು ಈ ಅಪಾಯದಿಂದ ಹೇಗೆ ಜೀವಂತವಾಗಿ ಬಂದೆ ಅನ್ನೋದೇ ಗೊತ್ತಿಲ್ಲ. ವಿಮಾನವು ಟೇಕ್ ಆಫ್ ಆದ ತಕ್ಷಣ ಸ್ಟಕ್ ಆದಂತೆ ಭಾಸವಾಯಿತು.
ನಂತರ ಗ್ರೀನ್ ಮತ್ತು ವೈಟ್ ಲೈಟ್ ಆನ್ ಆಗಿದೆ. ಪೈಲಟ್ಗಳು ನಿಯಂತ್ರಣ ಸಾಧಿಸಿ ವಿಮಾನವನ್ನು ಮೇಲಕ್ಕೆ ಕೊಂಡೊಯ್ಯಲು ಪ್ರಯತ್ನಿಸಿದರು. ಆದರೆ ವೇಗದಿಂದ ವಿಮಾನ ಪತನಗೊಂಡಿದೆ. ಇನ್ನೇನು ನಾನು ಸಾಯುತ್ತೇನೆ ಅನ್ಕೊಂಡೆ. ಆದರೆ ನಾನು ಕಣ್ಣು ತೆರೆದಾಗ, ನಾನು ಬದುಕಿರೋದನ್ನು ನೋಡಿದೆ. ನಾನು ನನ್ನ ಸೀಟ್ ಬೆಲ್ಟ್ ತೆರೆದು ಹೊರಬಂದೆ ಆದರೆ ನನ್ನ ಕಣ್ಣೆದುರಲ್ಲೇ ಅಂಕಲ್, ಆಂಟಿ ಹಾಗೂ ಗಗನಸಖಿಯರು ಪ್ರಾಣಬಿಟ್ಟರು. ನಾನು ಭೂಮಿಯ ಹತ್ತಿರಕ್ಕೆ ಬಿದ್ದಿದೆ. ಅದು ಗ್ರೌಂಡ್ ಫ್ಲೋರ್ನಲ್ಲಿ ಜಾಗವಿತ್ತು. ಅಲ್ಲಿಂದ ನಾನು ಹೊರಬಂದೆ ಎಂದಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…