ನದಿ, ಹಳ್ಳ ತುಂಬಿ ಹರಿಯುತ್ತಿದ್ದು ಅಪಾಯಕಾರಿಯಾಗಿದೆ. ಈ ಕಾಲು ಸಂಕದ ಮೂಲಕ ದಾಟಬೇಡಿ ಎಂದು ಇರ್ವತ್ತೂರು ಗ್ರಾ.ಪಂ.ಅಧಿಕೃತ ಆದೇಶದ ಬ್ಯಾನರ್ ಅಳವಡಿಸಲಾಗಿದೆ. ಮೂಡುಪಡುಕೋಡಿ ಗ್ರಾಮದ ಅಗರ್ದಬೈಲು ಎಂಬಲ್ಲಿ ಕಾಲು ಸಂಕವಿದೆ. ಈ ಕಾಲು ಸಂಕದ ಮೂಲಕ ಬಾಂಬಿಲ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.
ಮಳೆಗಾಲ ಅರಂಭವಾಗುತ್ತಿದ್ದ0ತೆ ಜಿಲ್ಲಾ ವಿಪತ್ತು ನಿರ್ವಹಣಾ ತಂಡದಿ0ದ ಜಾಗೃತಿಯನ್ನು ಮೂಡಿಸುವ ಮತ್ತು ಅಪಾಯಕಾರಿ ಸನ್ನಿವೇಶಗಳು ಕಂಡು ಬಂದಲ್ಲಿ ಸ್ಥಳೀಯ ಆಡಳಿತದ ಮೂಲಕ ಎಚ್ಚರಿಸುವ ಕಾರ್ಯ ನಡೆಯುವುದು ನಿರಂತರವಾಗಿ ನಡೆಯುತ್ತಾ ಬಂದಿದೆ. ಅಪಾಯಕಾರಿ ಕಾಲು ಸಂಕದಲ್ಲಿ ದಾಟುವುದನ್ನು ನಿಷೇಧಿಸಲಾಗಿದೆ ಎಂದು ಇರ್ವತ್ತೂರು ಗ್ರಾ.ಪಂ.ಎಚ್ಚರಿಕೆ ಫಲಕವನ್ನು ಹಾಕಿರುವುದರ ವಿರುದ್ದ ಗ್ರಾಮಸ್ಥರು ಗರಂ ಆಗಿದ್ದು ಇದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಪ್ರತಿ ಮಳೆಗಾಲದಲ್ಲಿ ಈ ಕಾಲು ಸಂಕದ ಮೇಲೆ ನೀರು ಬರುತ್ತಿದ್ದು, ಎತ್ತರದ ಮತ್ತು ವಾಹನ ಓಡಾಟಕ್ಕೆ ಅನುಕೂಲಕರವಾದ ಸಂಕವನ್ನು ಮಾಡಿಕೊಡಿ ಎಂಬುದು ಇಲ್ಲಿನ ಗ್ರಾಮಸ್ಥರ ಬೇಡಿಕೆಯಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…