ನದಿ, ಹಳ್ಳ ತುಂಬಿ ಹರಿಯುತ್ತಿದ್ದು ಅಪಾಯಕಾರಿಯಾಗಿದೆ. ಈ ಕಾಲು ಸಂಕದ ಮೂಲಕ ದಾಟಬೇಡಿ ಎಂದು ಇರ್ವತ್ತೂರು ಗ್ರಾ.ಪಂ.ಅಧಿಕೃತ ಆದೇಶದ ಬ್ಯಾನರ್ ಅಳವಡಿಸಲಾಗಿದೆ. ಮೂಡುಪಡುಕೋಡಿ ಗ್ರಾಮದ ಅಗರ್ದಬೈಲು ಎಂಬಲ್ಲಿ ಕಾಲು ಸಂಕವಿದೆ. ಈ ಕಾಲು ಸಂಕದ ಮೂಲಕ ಬಾಂಬಿಲ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.
ಮಳೆಗಾಲ ಅರಂಭವಾಗುತ್ತಿದ್ದ0ತೆ ಜಿಲ್ಲಾ ವಿಪತ್ತು ನಿರ್ವಹಣಾ ತಂಡದಿ0ದ ಜಾಗೃತಿಯನ್ನು ಮೂಡಿಸುವ ಮತ್ತು ಅಪಾಯಕಾರಿ ಸನ್ನಿವೇಶಗಳು ಕಂಡು ಬಂದಲ್ಲಿ ಸ್ಥಳೀಯ ಆಡಳಿತದ ಮೂಲಕ ಎಚ್ಚರಿಸುವ ಕಾರ್ಯ ನಡೆಯುವುದು ನಿರಂತರವಾಗಿ ನಡೆಯುತ್ತಾ ಬಂದಿದೆ. ಅಪಾಯಕಾರಿ ಕಾಲು ಸಂಕದಲ್ಲಿ ದಾಟುವುದನ್ನು ನಿಷೇಧಿಸಲಾಗಿದೆ ಎಂದು ಇರ್ವತ್ತೂರು ಗ್ರಾ.ಪಂ.ಎಚ್ಚರಿಕೆ ಫಲಕವನ್ನು ಹಾಕಿರುವುದರ ವಿರುದ್ದ ಗ್ರಾಮಸ್ಥರು ಗರಂ ಆಗಿದ್ದು ಇದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಪ್ರತಿ ಮಳೆಗಾಲದಲ್ಲಿ ಈ ಕಾಲು ಸಂಕದ ಮೇಲೆ ನೀರು ಬರುತ್ತಿದ್ದು, ಎತ್ತರದ ಮತ್ತು ವಾಹನ ಓಡಾಟಕ್ಕೆ ಅನುಕೂಲಕರವಾದ ಸಂಕವನ್ನು ಮಾಡಿಕೊಡಿ ಎಂಬುದು ಇಲ್ಲಿನ ಗ್ರಾಮಸ್ಥರ ಬೇಡಿಕೆಯಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…