16 ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆ ಜೊತೆಗೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂಬುವುದನ್ನ ಹೇಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇವರು 16 ನೇ ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತಾನಾಡಿದ್ರು. 16 ನೇ ಹಣಕಾಸಿನ ಆಯೋಗದ ಅಧ್ಯಕ್ಷ ಅರವಿಂದ ಪರಗಾರಿಯಾ ಮತ್ತು ಸದಸ್ಯರನ್ನು ಭೇಟಿಯಾಗಿ ಹೆಚ್ಚುವರಿ ಜ್ಞಾಪನಾ ಪತ್ರವನ್ನು ಆಯೋಗಕ್ಕೆ ಸಲ್ಲಿಸಲಾಗಿದೆ. 2011-2012 ರಲ್ಲಿ ಕರ್ನಾಟಕ ರಾಜ್ಯವು ಜಿಡಿಪಿಗೆ ಶೇ 7ರಷ್ಟು ಕೊಡುಗೆ ನೀಡಿದ್ದಾರೆ. 2024-25 ರಲ್ಲಿ ರಾಜ್ಯವು ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.8.7ರಷ್ಟುಕೊಡುಗೆ ನೀಡುತ್ತಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ನಮ್ಮ ರಾಜ್ಯ ದೇಶದಲ್ಲಿಯೇ 2 ನೇ ಸ್ಥಾನದಲ್ಲಿದೆ. ಒಟ್ಟು ಜನಸಂಖ್ಯೆಯಲ್ಲಿ ಶೇ 5ರಷ್ಟಿದ್ದೇವೆ. 5 ವರ್ಷಗಳಿಗೊಮ್ಮೆ ಹಣಕಾಸಿನ ಆಯೋಗ ರಚನೆಯಾಗುತ್ತದೆ. ಸಂವಿಧಾನದ ಅನುಚ್ಛೇದ 180 ಪ್ರಕಾರ ತೆರಿಗೆ ಹಂಚಿಕೆಯಾಗಬೇಕೆAದು ಹೇಳಲಾಗಿದ್ದು ಯಾರಿಗೂ ಅನ್ಯಾಯವಾಗಬಾರದೆಂದು ಸ್ಪಷ್ಟಪಡಿಸಿದೆ ಎಂದಿದ್ದಾರೆ.
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…