ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಕಾನೆಕೆರೆ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.
ದೇರಳಕಟ್ಟೆ ಕಾನೆಕೆರೆ ನಿವಾಸಿ ಶಿವಾನಂದ ರೆಡ್ಡಿ ಎಂಬವರ ಪುತ್ರ 25 ವರ್ಷದ ವಿನಯ್ ಕುಮಾರ್ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ನಸುಕಿನ ಜಾವ ಹೃದಯ ಭಾಗದಲ್ಲಿ ನೋವುಂಟಾಗಿದ್ದು, ಕೆಲ ಕ್ಷಣಗಳಲ್ಲೇ ವಿನಯ್ ಸಾವನ್ನಪ್ಪಿದ್ದಾರೆ. ನಡುಪದವು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿನಯ್ ಉದ್ಯೋಗದಲ್ಲಿದ್ರು. ಶಬರಿಮಲೆ ಯಾತ್ರೆಗೆ ತೆರಳುವ ಸಂದರ್ಭ ಕಾಲಿಗೆ ಕಲ್ಲು ಚುಚ್ಚಿ, ಸೆಪ್ಟಿಕ್ ಆಗಿ ಬೆರಳನ್ನು ಕತ್ತರಿಸಲಾಗಿತ್ತು. ಈ ಹಿಂದೆ ದಪ್ಪ ಶರೀರವನ್ನು ಹೊಂದಿದ್ದ ವಿನಯ್ ಡಯೆಟಿಂಗ್ ಮೂಲಕ ತೂಕವನ್ನು ಇಳಿಸಿದ್ರು. ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನದಲ್ಲಿ ತನ್ನನ್ನು ಸಕ್ರಿಯವಾಗಿ ವಿನಯ್ ತೊಡಗಿಸಿಕೊಂಡಿದ್ದು, ತಂದೆ ಶಿವಾನಂದ ರೆಡ್ಡಿಯವರು ಭಜನಾ ಸಂಕೀರ್ತನೆಯಲ್ಲಿ ಸಕ್ರಿಯ ಹಾರ್ಮೋನಿಯಂ ವಾದಕರಾಗಿದ್ರು. ಅದಲ್ಲದೇ ಉಚಿತವಾಗಿ ಮಕ್ಕಳಿಗೆ ಹಾರ್ಮೋನಿಯಂ ಕಲಿಸಿಕೊಡುತ್ತಿದ್ದಾರೆ. ಬಳ್ಳಾರಿ ಮೂಲದವರಾಗಿರುವ ಕುಟುಂಬ ಕಳೆದ 25 ವರ್ಷಗಳಿಂದ ದೇರಳಕಟ್ಟೆ ಕಾನೆಕೆರೆಯಲ್ಲಿ ವಾಸವಿದ್ರು. ಮೃತ ವಿನಯ್, ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…