ಹಿ0ದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದು ಹತ್ಯಾ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ವಾರದ ಹಿಂದೆಯಷ್ಟೇ ಈ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ಎನ್.ಐ.ಎ.ಗೆ ವಹಿಸಿತ್ತು. ಬೆಂಗಳೂರು ಘಟಕದ ಅಧಿಕಾರಿಗಳು ಮಂಗಳೂರಿಗೆ ಬಂದು ಮಾಹಿತಿ ಕಲೆ ಹಾಕುತ್ತಿದ್ದಾರೆ. ಡಿ.ವೈ.ಎಸ್.ಪಿ. ಪವನ್ ಕುಮಾರ್ ನೇತೃತ್ವದಲ್ಲಿ ಇಬ್ಬರು ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಯನ್ನು ಒಳಗೊಂಡ ತಂಡ ಮಂಗಳೂರು ಸಿ.ಸಿ.ಬಿ. ಮತ್ತು ಇತರ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಹಿಂದೆ ಪಿ.ಎಫ್.ಐ. ಕಾರ್ಯಕರ್ತರು ಇರಬಹುದೆಂಬ ಗುಮಾನಿ ವ್ಯಕ್ತಪಡಿಸಿ ಹಿಂದೂ ಸಂಘಟನೆಗಳು ಎನ್.ಐ.ಎ. ತನಿಖೆಗೆ ಆಗ್ರಹಿಸಿದ್ದವು. ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕೂಡಾ ಈ ಬಗ್ಗೆ ಕೇಂದ್ರ ಸರಕಾರಕ್ಕೆ ಪತ್ರ ಬರೆದು ನಿಷೇಧಿತ ಪಿ.ಎಫ್.ಐ. ಸಂಘಟನೆಯ ಕೈವಾಡ ಇದರ ಹಿಂದೆ ಇರಬಹುದಾದ ಶಂಕೆಯನ್ನು ವ್ಯಕ್ತಪಡಿಸಿ ಎನ್.ಐ.ಎ. ತನಿಖೆಗೆ ಒತ್ತಾಯಿಸಿದ್ರು. ಇತ್ತ ನಿನ್ನೆ ಮಂಗಳೂರಿಗೆ ಬಂದಿದ್ದ ರಾಜ್ಯ ಗೃಹ ಸಚಿವರಾದ ಡಾ. ಪರಮೇಶ್ವರ್ ಎನ್.ಐ.ಎ. ತನಿಖೆ ಕೊಟ್ಟಿದ್ದಾರೆ, ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…