ಜನ ಮನದ ನಾಡಿ ಮಿಡಿತ

ಉಡುಪಿ: ಉಡುಪಿಯಲ್ಲಿ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದು ಓರ್ವ ಮೃತ್ಯು

ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಕೋರ್ಟ್ ಹಿಂಭಾಗ ರಸ್ತೆಯ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಸಂಭವಿಸಿದೆ.

ಮೃತರನ್ನು ಫ್ರಾನ್ಸಿಸ್ ಎಂದು ಗುರುತಿಸಲಾಗಿದೆ. ಇವರು ಮನೆ ಮಾಲೀಕರ ಸಹೋದರ ಎಂದು ತಿಳಿದುಬಂದಿದೆ. ಮನೆ ಕೆಲಸದಾಕೆ ಮಲ್ಪೆ ಕಲ್ಮಾಡಿ ನಿವಾಸಿ ಶಾರದಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆ ಮಾಲೀಕನ ಸಹೋದರ ಫ್ರಾನಿಸ್ಸ್ ಹಾಗೂ ಕೆಲಸದಾಕೆ ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರಿಶೀಲಿಸಲು ಕ್ರೇನ್‌ನಲ್ಲಿ ಹೋಗಿದ್ದು, ಈ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆ ತಿಳಿದ ತಕ್ಷಣವೇ ಧಾವಿಸಿ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳೀಯರ ಸಹಕಾರದೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ರು. ಇಬ್ಬರು ಬಿದ್ದು ನರಳಾಡುತ್ತಿದ್ದರೂ, ಕ್ರೇನ್ ಚಾಲಕ ರಕ್ಷಣೆಗೆ ಬಾರದೆ ಕ್ರೇನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಮೂಲ್ಕಿ: ಮೂಲ್ಕಿಯ ಶಾಂಭವಿ ಹೊಳೆಯ ಬಪ್ಪನಾಡು ಭಾಗದಲ್ಲಿ ಪತ್ತೆ

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಎನ್‌ಐಎ ಅಧಿಕಾರಿಗಳಿಂದ ಮಂಗಳೂರಿನಲ್ಲಿ ಮಾಹಿತಿ ಸಂಗ್ರಹ

ಮಂಗಳೂರು: ಮಂಗಳೂರಿನಲ್ಲಿ ಸುರಿಯುತ್ತಿರುವ ಧಾರಕಾರ ಮಳೆ

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ

ಮಂಗಳೂರು: 26 ಗಂಟೆಯ ಬಳಿಕ ನನ್ನ ಮೇಲೆ ಕೇಸ್ ಹಾಕಿದ್ದು ಯಾಕೆ? ಬಾವಾ ಪ್ರಶ್ನೆ

ಮಂಗಳೂರು: ಕ್ಲಾಕ್ ಟವರ್ ಬಳಿ ಅಗ್ನಿ ದುರಂತ; ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮ..!

ದೇರಳಕಟ್ಟೆ: ಹೃದಯಾಘಾತದಿಂದ ಸಾವನ್ನಪ್ಪಿದ 25ರ ಹರೆಯದ ಯುವಕ..?!

ನವದೆಹಲಿ: 16ನೇ ಹಣಕಾಸಿನ ಆಯೋಗದ ಸಭೆ

ಬಂಟ್ವಾಳ: ಮೂಡುಪಡುಕೋಡಿ ಗ್ರಾ.ಪಂ. ವಿರುದ್ಧ ಗ್ರಾಮಸ್ಥರು ಗರಂ ; ವಿಡಿಯೋ ವೈರಲ್

error: Content is protected !!