ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿಯಲ್ಲಿ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದು ಓರ್ವ ಮೃತ್ಯು

ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಕೋರ್ಟ್ ಹಿಂಭಾಗ ರಸ್ತೆಯ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಸಂಭವಿಸಿದೆ.

ಮೃತರನ್ನು ಫ್ರಾನ್ಸಿಸ್ ಎಂದು ಗುರುತಿಸಲಾಗಿದೆ. ಇವರು ಮನೆ ಮಾಲೀಕರ ಸಹೋದರ ಎಂದು ತಿಳಿದುಬಂದಿದೆ. ಮನೆ ಕೆಲಸದಾಕೆ ಮಲ್ಪೆ ಕಲ್ಮಾಡಿ ನಿವಾಸಿ ಶಾರದಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆ ಮಾಲೀಕನ ಸಹೋದರ ಫ್ರಾನಿಸ್ಸ್ ಹಾಗೂ ಕೆಲಸದಾಕೆ ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರಿಶೀಲಿಸಲು ಕ್ರೇನ್‌ನಲ್ಲಿ ಹೋಗಿದ್ದು, ಈ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆ ತಿಳಿದ ತಕ್ಷಣವೇ ಧಾವಿಸಿ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳೀಯರ ಸಹಕಾರದೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ರು. ಇಬ್ಬರು ಬಿದ್ದು ನರಳಾಡುತ್ತಿದ್ದರೂ, ಕ್ರೇನ್ ಚಾಲಕ ರಕ್ಷಣೆಗೆ ಬಾರದೆ ಕ್ರೇನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!