ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಕೋರ್ಟ್ ಹಿಂಭಾಗ ರಸ್ತೆಯ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಸಂಭವಿಸಿದೆ.
ಮೃತರನ್ನು ಫ್ರಾನ್ಸಿಸ್ ಎಂದು ಗುರುತಿಸಲಾಗಿದೆ. ಇವರು ಮನೆ ಮಾಲೀಕರ ಸಹೋದರ ಎಂದು ತಿಳಿದುಬಂದಿದೆ. ಮನೆ ಕೆಲಸದಾಕೆ ಮಲ್ಪೆ ಕಲ್ಮಾಡಿ ನಿವಾಸಿ ಶಾರದಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆ ಮಾಲೀಕನ ಸಹೋದರ ಫ್ರಾನಿಸ್ಸ್ ಹಾಗೂ ಕೆಲಸದಾಕೆ ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರಿಶೀಲಿಸಲು ಕ್ರೇನ್ನಲ್ಲಿ ಹೋಗಿದ್ದು, ಈ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆ ತಿಳಿದ ತಕ್ಷಣವೇ ಧಾವಿಸಿ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳೀಯರ ಸಹಕಾರದೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ರು. ಇಬ್ಬರು ಬಿದ್ದು ನರಳಾಡುತ್ತಿದ್ದರೂ, ಕ್ರೇನ್ ಚಾಲಕ ರಕ್ಷಣೆಗೆ ಬಾರದೆ ಕ್ರೇನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಮೂಲ್ಕಿಯ ಶಾಂಭವಿ ಹೊಳೆಯ ಬಪ್ಪನಾಡು ಭಾಗದಲ್ಲಿ ಅಪರಿಚಿತ ಶವ ಕಂಡುಬ0ದಿದೆ. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನ…
ಹಿ0ದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದು ಹತ್ಯಾ…
ಮಂಗಳೂರಿನಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣವಿತ್ತು. ಸಂಜೆಯಾಗುತ್ತಲೇ ಎಡೆಬಿಡದೇ ಮಳೆ ಸುರಿಯುತ್ತಿದೆ. ವಾಹನ ಸಂಚಾರಕ್ಕೂ…
ಕೊಲ್ಲೂರು ದೇವಳಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿದ್ದಾರೆ. ಕೊಲ್ಲೂರಿನಲ್ಲಿ ಮೂಕಾಂಬಿಕೆಯ ದರ್ಶನ ಪಡೆದ ಗೃಹಸಚಿವರು, ಬಳಿಕ ದೇವಳದಲ್ಲಿ ವಿಶೇಷ…
ಕನ್ಸ್ಟಕ್ಷನ್ ಸಂಸ್ಥೆಯೊ0ದರ ಸಹ ಗುತ್ತಿಗೆದಾರನ ಬಿಲ್ ಕೇಳಲು ಹೋದಾಗ ಅಲ್ಲಿನ ಡೆಪ್ಯುಟಿ ಚೇರ್ಮೆನ್ ಜೊತೆ ಗೌರವಯುತವಾಗಿ ವರ್ತಿಸಿದ್ದೇನೆ. ಆದರೆ 26…
ಮಂಗಳೂರಿನ ಕ್ಲಾಕ್ ಟವರ್ ಬಳಿ ಅಗ್ನಿ ಅವಘಡ ಸಂಭವಿಸಿ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ. …