ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಕೋರ್ಟ್ ಹಿಂಭಾಗ ರಸ್ತೆಯ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಸಂಭವಿಸಿದೆ.
ಮೃತರನ್ನು ಫ್ರಾನ್ಸಿಸ್ ಎಂದು ಗುರುತಿಸಲಾಗಿದೆ. ಇವರು ಮನೆ ಮಾಲೀಕರ ಸಹೋದರ ಎಂದು ತಿಳಿದುಬಂದಿದೆ. ಮನೆ ಕೆಲಸದಾಕೆ ಮಲ್ಪೆ ಕಲ್ಮಾಡಿ ನಿವಾಸಿ ಶಾರದಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆ ಮಾಲೀಕನ ಸಹೋದರ ಫ್ರಾನಿಸ್ಸ್ ಹಾಗೂ ಕೆಲಸದಾಕೆ ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರಿಶೀಲಿಸಲು ಕ್ರೇನ್ನಲ್ಲಿ ಹೋಗಿದ್ದು, ಈ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆ ತಿಳಿದ ತಕ್ಷಣವೇ ಧಾವಿಸಿ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳೀಯರ ಸಹಕಾರದೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ರು. ಇಬ್ಬರು ಬಿದ್ದು ನರಳಾಡುತ್ತಿದ್ದರೂ, ಕ್ರೇನ್ ಚಾಲಕ ರಕ್ಷಣೆಗೆ ಬಾರದೆ ಕ್ರೇನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…