ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಕೋರ್ಟ್ ಹಿಂಭಾಗ ರಸ್ತೆಯ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಸಂಭವಿಸಿದೆ.
ಮೃತರನ್ನು ಫ್ರಾನ್ಸಿಸ್ ಎಂದು ಗುರುತಿಸಲಾಗಿದೆ. ಇವರು ಮನೆ ಮಾಲೀಕರ ಸಹೋದರ ಎಂದು ತಿಳಿದುಬಂದಿದೆ. ಮನೆ ಕೆಲಸದಾಕೆ ಮಲ್ಪೆ ಕಲ್ಮಾಡಿ ನಿವಾಸಿ ಶಾರದಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆ ಮಾಲೀಕನ ಸಹೋದರ ಫ್ರಾನಿಸ್ಸ್ ಹಾಗೂ ಕೆಲಸದಾಕೆ ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರಿಶೀಲಿಸಲು ಕ್ರೇನ್ನಲ್ಲಿ ಹೋಗಿದ್ದು, ಈ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆ ತಿಳಿದ ತಕ್ಷಣವೇ ಧಾವಿಸಿ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳೀಯರ ಸಹಕಾರದೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ರು. ಇಬ್ಬರು ಬಿದ್ದು ನರಳಾಡುತ್ತಿದ್ದರೂ, ಕ್ರೇನ್ ಚಾಲಕ ರಕ್ಷಣೆಗೆ ಬಾರದೆ ಕ್ರೇನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…