ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಮನೆ ದುರಸ್ಥಿ ಮಾಡಿಕೊಡುತ್ತೇನೆ: ವಿದ್ಯಾರ್ಥಿನಿ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

ಭಾನುವಾರ ಸಂಜೆ ಆರ್ಯಾಪು ಗ್ರಾಮದ ಸಂಟ್ಯಾರ್ ಕಲ್ಲಕಟ್ಟದಲ್ಲಿ ಕಾಂಕ್ರೀಟ್ ರಸ್ತೆ ಉದ್ಘಾಟನೆಗೆ ಶಾಸಕ ಅಶೋಕ್ ರೈ ತೆರಳಿದ್ದರು. ರಸ್ತೆ ಉದ್ಘಾಟನಾ ಕಾರ್ಯಕ್ರಮ ಮುಗಿದು ಬರುವ ವೇಳೆ ಶಾಸಕರ ಕಾರಿಗೆ ಬಾಲಕಿಯೋರ್ವರು ಅಡ್ಡ ನಿಂತಿದ್ದಾಳೆ.

ಏನೋ ಇರಬೇಕು ಎಂದು ಕಾರು ನಿಲ್ಲಿಸಲಾಯಿತು. ಆ ವೇಳೆ ಶಾಸಕರ ಬಳಿ ಓಡೋಡಿ ಬಂದ ಬಾಲಕಿ ಅಶೋಕಣ್ಣ ನಮ್ಮ ಮನೆ ಸೋರುತ್ತಿದೆ, ಮಲಗಲು ಆಗುತ್ತಿಲ್ಲ, ಓದಲು ಬರೆಯಲು ಆಗುತ್ತಿಲ್ಲ ನೀವು ರಿಪೇರಿ ಮಾಡಿಕೊಡಬೇಕು ಎಂದು ಹೇಳಿದ್ದಾಳೆ. ಪುಟ್ಟ ಬಾಲಕಿಯ ಮನವಿಯನ್ನು ಕೇಳಿ ಕಾರಿನಿಂದ ಇಳಿದ ಶಾಸಕರು ಬಾಲಕಿಯ ತಲೆ ಸವರಿ ಎಲ್ಲಮ್ಮಾ ನಿನ್ನ ಮನೆ ಎಂದು ಕೇಳಿದಾಗ ಅಲ್ಲೇ ಮೇಲೆ ಎಂದು ಹೇಳಿದ್ದಾಳೆ. ಕೂಡಲೇ ಸ್ಥಳೀಯ ಬೂತ್ ಅಧ್ಯಕ್ಷರನ್ನು ಕರೆಸಿ ಬಾಲಕಿಯ ಮನೆಯ ವಿಚಾರವನ್ನು ತಿಳಿದುಕೊಂಡರು. ಬಾಲಕಿಯ ತಂದೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದು ದಲಿತ ಕುಟುಂಬಕ್ಕೆ ಸೇರಿದವಳಾಗಿದ್ದಳು.

ಮನೆ ಪ್ರತೀ ಮಳೆಗಾಲದಲ್ಲೂ ಸೋರುತ್ತದೆ ಎಂಬ ವಿಚಾರವೂ ಇವರ ಗಮನಕ್ಕೆ ಬಂತು. ಕೂಡಲೇ ಶಾಸಕರು ನಿಮ್ಮ ಮನೆಗೆ ನಾನು ಶೀಟು ಹಾಕಿ ಕೊಡುತ್ತೇನೆ, ನೀನು ಹಾಸ್ಟೆಲ್‌ನಲ್ಲಿ ಕಲಿಯುವ ಆಸಕ್ತಿ ಇದ್ದರೆ ಅದಕ್ಕೂ ವ್ಯವಸ್ಥೆ ಮಾಡಿಕೊಡುತ್ತೇನೆ, ಬರೆಯುವ ಪುಸ್ತಕ ಬೇಕಿದ್ದರೆ ಅದನ್ನೂ ಮಾಡಿಕೊಡುತ್ತೇನೆ. ಏನೂ ಚಿಂತೆ ಮಾಡಬೇಡ ನಿನ್ನ ಸೋರುತ್ತಿರುವ ಮನೆಗೆ ಮುಕ್ತಿ ನೀಡುತ್ತೇನೆ ಎಂದು ಬಾಲಕಿಯನ್ನು ಸಮಾಧಾನ ಪಡಿಸಿದ್ದಾರೆ. ಈಕೆ ಸಂಟ್ಯಾರ್ ಸರಕಾರಿ ಹಿ ಪ್ರಾ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಕಲಿಯುತ್ತಿರುವ ದೀಪಾಶ್ರೀ ಎಂಬ ವಿಧ್ಯಾರ್ಥಿನಿಯಾಗಿದ್ದಾಳೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!