ಭಾನುವಾರ ಸಂಜೆ ಆರ್ಯಾಪು ಗ್ರಾಮದ ಸಂಟ್ಯಾರ್ ಕಲ್ಲಕಟ್ಟದಲ್ಲಿ ಕಾಂಕ್ರೀಟ್ ರಸ್ತೆ ಉದ್ಘಾಟನೆಗೆ ಶಾಸಕ ಅಶೋಕ್ ರೈ ತೆರಳಿದ್ದರು. ರಸ್ತೆ ಉದ್ಘಾಟನಾ ಕಾರ್ಯಕ್ರಮ ಮುಗಿದು ಬರುವ ವೇಳೆ ಶಾಸಕರ ಕಾರಿಗೆ ಬಾಲಕಿಯೋರ್ವರು ಅಡ್ಡ ನಿಂತಿದ್ದಾಳೆ.
ಏನೋ ಇರಬೇಕು ಎಂದು ಕಾರು ನಿಲ್ಲಿಸಲಾಯಿತು. ಆ ವೇಳೆ ಶಾಸಕರ ಬಳಿ ಓಡೋಡಿ ಬಂದ ಬಾಲಕಿ ಅಶೋಕಣ್ಣ ನಮ್ಮ ಮನೆ ಸೋರುತ್ತಿದೆ, ಮಲಗಲು ಆಗುತ್ತಿಲ್ಲ, ಓದಲು ಬರೆಯಲು ಆಗುತ್ತಿಲ್ಲ ನೀವು ರಿಪೇರಿ ಮಾಡಿಕೊಡಬೇಕು ಎಂದು ಹೇಳಿದ್ದಾಳೆ. ಪುಟ್ಟ ಬಾಲಕಿಯ ಮನವಿಯನ್ನು ಕೇಳಿ ಕಾರಿನಿಂದ ಇಳಿದ ಶಾಸಕರು ಬಾಲಕಿಯ ತಲೆ ಸವರಿ ಎಲ್ಲಮ್ಮಾ ನಿನ್ನ ಮನೆ ಎಂದು ಕೇಳಿದಾಗ ಅಲ್ಲೇ ಮೇಲೆ ಎಂದು ಹೇಳಿದ್ದಾಳೆ. ಕೂಡಲೇ ಸ್ಥಳೀಯ ಬೂತ್ ಅಧ್ಯಕ್ಷರನ್ನು ಕರೆಸಿ ಬಾಲಕಿಯ ಮನೆಯ ವಿಚಾರವನ್ನು ತಿಳಿದುಕೊಂಡರು. ಬಾಲಕಿಯ ತಂದೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದು ದಲಿತ ಕುಟುಂಬಕ್ಕೆ ಸೇರಿದವಳಾಗಿದ್ದಳು.
ಮನೆ ಪ್ರತೀ ಮಳೆಗಾಲದಲ್ಲೂ ಸೋರುತ್ತದೆ ಎಂಬ ವಿಚಾರವೂ ಇವರ ಗಮನಕ್ಕೆ ಬಂತು. ಕೂಡಲೇ ಶಾಸಕರು ನಿಮ್ಮ ಮನೆಗೆ ನಾನು ಶೀಟು ಹಾಕಿ ಕೊಡುತ್ತೇನೆ, ನೀನು ಹಾಸ್ಟೆಲ್ನಲ್ಲಿ ಕಲಿಯುವ ಆಸಕ್ತಿ ಇದ್ದರೆ ಅದಕ್ಕೂ ವ್ಯವಸ್ಥೆ ಮಾಡಿಕೊಡುತ್ತೇನೆ, ಬರೆಯುವ ಪುಸ್ತಕ ಬೇಕಿದ್ದರೆ ಅದನ್ನೂ ಮಾಡಿಕೊಡುತ್ತೇನೆ. ಏನೂ ಚಿಂತೆ ಮಾಡಬೇಡ ನಿನ್ನ ಸೋರುತ್ತಿರುವ ಮನೆಗೆ ಮುಕ್ತಿ ನೀಡುತ್ತೇನೆ ಎಂದು ಬಾಲಕಿಯನ್ನು ಸಮಾಧಾನ ಪಡಿಸಿದ್ದಾರೆ. ಈಕೆ ಸಂಟ್ಯಾರ್ ಸರಕಾರಿ ಹಿ ಪ್ರಾ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಕಲಿಯುತ್ತಿರುವ ದೀಪಾಶ್ರೀ ಎಂಬ ವಿಧ್ಯಾರ್ಥಿನಿಯಾಗಿದ್ದಾಳೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…