ಭಾನುವಾರ ಸಂಜೆ ಆರ್ಯಾಪು ಗ್ರಾಮದ ಸಂಟ್ಯಾರ್ ಕಲ್ಲಕಟ್ಟದಲ್ಲಿ ಕಾಂಕ್ರೀಟ್ ರಸ್ತೆ ಉದ್ಘಾಟನೆಗೆ ಶಾಸಕ ಅಶೋಕ್ ರೈ ತೆರಳಿದ್ದರು. ರಸ್ತೆ ಉದ್ಘಾಟನಾ ಕಾರ್ಯಕ್ರಮ ಮುಗಿದು ಬರುವ ವೇಳೆ ಶಾಸಕರ ಕಾರಿಗೆ ಬಾಲಕಿಯೋರ್ವರು ಅಡ್ಡ ನಿಂತಿದ್ದಾಳೆ.
ಏನೋ ಇರಬೇಕು ಎಂದು ಕಾರು ನಿಲ್ಲಿಸಲಾಯಿತು. ಆ ವೇಳೆ ಶಾಸಕರ ಬಳಿ ಓಡೋಡಿ ಬಂದ ಬಾಲಕಿ ಅಶೋಕಣ್ಣ ನಮ್ಮ ಮನೆ ಸೋರುತ್ತಿದೆ, ಮಲಗಲು ಆಗುತ್ತಿಲ್ಲ, ಓದಲು ಬರೆಯಲು ಆಗುತ್ತಿಲ್ಲ ನೀವು ರಿಪೇರಿ ಮಾಡಿಕೊಡಬೇಕು ಎಂದು ಹೇಳಿದ್ದಾಳೆ. ಪುಟ್ಟ ಬಾಲಕಿಯ ಮನವಿಯನ್ನು ಕೇಳಿ ಕಾರಿನಿಂದ ಇಳಿದ ಶಾಸಕರು ಬಾಲಕಿಯ ತಲೆ ಸವರಿ ಎಲ್ಲಮ್ಮಾ ನಿನ್ನ ಮನೆ ಎಂದು ಕೇಳಿದಾಗ ಅಲ್ಲೇ ಮೇಲೆ ಎಂದು ಹೇಳಿದ್ದಾಳೆ. ಕೂಡಲೇ ಸ್ಥಳೀಯ ಬೂತ್ ಅಧ್ಯಕ್ಷರನ್ನು ಕರೆಸಿ ಬಾಲಕಿಯ ಮನೆಯ ವಿಚಾರವನ್ನು ತಿಳಿದುಕೊಂಡರು. ಬಾಲಕಿಯ ತಂದೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದು ದಲಿತ ಕುಟುಂಬಕ್ಕೆ ಸೇರಿದವಳಾಗಿದ್ದಳು.
ಮನೆ ಪ್ರತೀ ಮಳೆಗಾಲದಲ್ಲೂ ಸೋರುತ್ತದೆ ಎಂಬ ವಿಚಾರವೂ ಇವರ ಗಮನಕ್ಕೆ ಬಂತು. ಕೂಡಲೇ ಶಾಸಕರು ನಿಮ್ಮ ಮನೆಗೆ ನಾನು ಶೀಟು ಹಾಕಿ ಕೊಡುತ್ತೇನೆ, ನೀನು ಹಾಸ್ಟೆಲ್ನಲ್ಲಿ ಕಲಿಯುವ ಆಸಕ್ತಿ ಇದ್ದರೆ ಅದಕ್ಕೂ ವ್ಯವಸ್ಥೆ ಮಾಡಿಕೊಡುತ್ತೇನೆ, ಬರೆಯುವ ಪುಸ್ತಕ ಬೇಕಿದ್ದರೆ ಅದನ್ನೂ ಮಾಡಿಕೊಡುತ್ತೇನೆ. ಏನೂ ಚಿಂತೆ ಮಾಡಬೇಡ ನಿನ್ನ ಸೋರುತ್ತಿರುವ ಮನೆಗೆ ಮುಕ್ತಿ ನೀಡುತ್ತೇನೆ ಎಂದು ಬಾಲಕಿಯನ್ನು ಸಮಾಧಾನ ಪಡಿಸಿದ್ದಾರೆ. ಈಕೆ ಸಂಟ್ಯಾರ್ ಸರಕಾರಿ ಹಿ ಪ್ರಾ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಕಲಿಯುತ್ತಿರುವ ದೀಪಾಶ್ರೀ ಎಂಬ ವಿಧ್ಯಾರ್ಥಿನಿಯಾಗಿದ್ದಾಳೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…