ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಜಂಕ್ಷನ್ ನಲ್ಲಿ ಹೆದ್ದಾರಿ ನದಿಯಂತಾಗಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.

ಸೂರಿಕುಮೇರು ಎಂಬಲ್ಲಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು ವಾಹನ ಸವಾರರು ಸಂಚಾರಕ್ಕೆ ಪರದಾಡುವಂತಾಯಿತು. ಬೆಳಿಗ್ಗೆ ಸುಮಾರು 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೂಡ ಇದೇ ಸ್ಥಿತಿಯಲ್ಲಿ ಕಂಡು ಬಂದಿದ್ದು, ಸಂಜೆ ವೇಳೆ ಚರಂಡಿಯ ಹೂಳೆತ್ತುವ ಕಾರ್ಯ ಕೈಗೆತ್ತಿಕೊಂಡಿದ್ದಾರೆ. ಕೆ.ಎನ್.ಆರ್.ಸಿ. ಕಂಪೆನಿಯಯವರ ನಿರ್ಲಕ್ಷ್ಯತನದ ಕಾಮಗಾರಿಯಿಂದ ರಸ್ತೆ ಸಹಿತ ಮನೆಗಳಿಗೆ ಮಳೆ ನೀರು ನುಗ್ಗುವಂತಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.



