ಜನ ಮನದ ನಾಡಿ ಮಿಡಿತ

Advertisement

ದೇರಳಕಟ್ಟೆ: ದೇರಳಕಟ್ಟೆ ಖಾಸಗಿ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ; 140 ವಿದ್ಯಾರ್ಥಿಗಳ ಸ್ಥಳಾಂತರ

ಖಾಸಗಿ ಸಂಸ್ಥೆಯ ವಿದ್ಯಾರ್ಥಿಗಳಿದ್ದ ದೇರಳಕಟ್ಟೆ ಜಂಕ್ಷನ್ನಿನಲ್ಲಿರುವ ಕಟ್ಟಡದಲ್ಲಿ ವಿದ್ಯುತ್ ಸರ್ಕ್ಯೂಟ್‌ನಿಂದ ಆಕಸ್ಮಿಕ ಬೆಂಕಿ ತಗಲಿದ್ದು, ಕಟ್ಟಡದೊಳಗಿದ್ದ 140 ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ.

ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದಾರೆ. ಸಂಜೆ 7.45ರ ಹೊತ್ತಿಗೆ ಕಟ್ಟಡದ ನೆಲಮಹಡಿಯಲ್ಲಿರುವ ಸ್ವಿಚ್ ಬೋರ್ಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ಹರಡಲು ಆರಂಭವಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಸ್ಥಳೀಯರು ಎದುರುಗಡೆಯಿದ್ದ ಪೆಟ್ರೋಲ್ ಪಂಪ್ ನಿಂದ ಬೆಂಕಿ ನಂದಿಸಲು ಉಪಯೋಗಿಸುವ ಸಾಮಗ್ರಿಗಳ ಸಹಾಯದಿಂದ ಬೆಂಕಿ ನಂದಿಸಲು ಆರಂಭಿಸಿದ್ದಾರೆ. ತಕ್ಷಣ ಕಟ್ಟಡದ ಮೇಲಿದ್ದ 140 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರ ತಂದಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ತಡವಾಗಿ ಆಗಮಿಸಿದ್ದರಿಂದಾಗಿ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ರು.

ಅದಾಗಲೇ ಬೆಂಕಿಯನ್ನು ನಂದಿಸುವಲ್ಲಿ ಸ್ಥಳೀಯರು ಸಫಲರಾಗಿದ್ದು, ವಿದ್ಯಾರ್ಥಿನಿಯರೆಲ್ಲರನ್ನೂ ಶಿಕ್ಷಣ ಸಂಸ್ಥೆ ಬೇರೆ ವಿದ್ಯಾರ್ಥಿನಿ ನಿಲಯಗಳಿಗೆ ಸ್ಥಳಾಂತರಿಸಿದ್ದಾರೆ. ವೇಣುಗೋಪಾಲ್ ಶೆಟ್ಟಿ ಎಂಬವರಿಗೆ ಸೇರಿದ ವೆಂಕಟ್ ರೆಸಿಡೆನ್ಸಿ ಐದು ಮಹಡಿಯ ಕಟ್ಟಡದ ಕೆಳಗಿನ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಘಟನಾ ಸ್ಥಳದಲ್ಲಿ ಅಗ್ನಿ ಶಾಮಕ ದಳ ಹಾಗೂ ಕೊಣಾಜೆ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!