ಖಾಸಗಿ ಸಂಸ್ಥೆಯ ವಿದ್ಯಾರ್ಥಿಗಳಿದ್ದ ದೇರಳಕಟ್ಟೆ ಜಂಕ್ಷನ್ನಿನಲ್ಲಿರುವ ಕಟ್ಟಡದಲ್ಲಿ ವಿದ್ಯುತ್ ಸರ್ಕ್ಯೂಟ್ನಿಂದ ಆಕಸ್ಮಿಕ ಬೆಂಕಿ ತಗಲಿದ್ದು, ಕಟ್ಟಡದೊಳಗಿದ್ದ 140 ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ.
ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದಾರೆ. ಸಂಜೆ 7.45ರ ಹೊತ್ತಿಗೆ ಕಟ್ಟಡದ ನೆಲಮಹಡಿಯಲ್ಲಿರುವ ಸ್ವಿಚ್ ಬೋರ್ಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ಹರಡಲು ಆರಂಭವಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಸ್ಥಳೀಯರು ಎದುರುಗಡೆಯಿದ್ದ ಪೆಟ್ರೋಲ್ ಪಂಪ್ ನಿಂದ ಬೆಂಕಿ ನಂದಿಸಲು ಉಪಯೋಗಿಸುವ ಸಾಮಗ್ರಿಗಳ ಸಹಾಯದಿಂದ ಬೆಂಕಿ ನಂದಿಸಲು ಆರಂಭಿಸಿದ್ದಾರೆ. ತಕ್ಷಣ ಕಟ್ಟಡದ ಮೇಲಿದ್ದ 140 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರ ತಂದಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ತಡವಾಗಿ ಆಗಮಿಸಿದ್ದರಿಂದಾಗಿ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ರು.
ಅದಾಗಲೇ ಬೆಂಕಿಯನ್ನು ನಂದಿಸುವಲ್ಲಿ ಸ್ಥಳೀಯರು ಸಫಲರಾಗಿದ್ದು, ವಿದ್ಯಾರ್ಥಿನಿಯರೆಲ್ಲರನ್ನೂ ಶಿಕ್ಷಣ ಸಂಸ್ಥೆ ಬೇರೆ ವಿದ್ಯಾರ್ಥಿನಿ ನಿಲಯಗಳಿಗೆ ಸ್ಥಳಾಂತರಿಸಿದ್ದಾರೆ. ವೇಣುಗೋಪಾಲ್ ಶೆಟ್ಟಿ ಎಂಬವರಿಗೆ ಸೇರಿದ ವೆಂಕಟ್ ರೆಸಿಡೆನ್ಸಿ ಐದು ಮಹಡಿಯ ಕಟ್ಟಡದ ಕೆಳಗಿನ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಘಟನಾ ಸ್ಥಳದಲ್ಲಿ ಅಗ್ನಿ ಶಾಮಕ ದಳ ಹಾಗೂ ಕೊಣಾಜೆ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…