ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಚಿಕ್ಕಪುತ್ತೂರಿನಲ್ಲಿ ನಡೆದಿದೆ. ಸುರತ್ಕಲ್ ಮೂಲದ ರೇಷ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ.
ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ರು. ಜೂ.15ರ ರಾತ್ರಿ ಮನೆಯಲ್ಲಿ ರೇಷ್ಮಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ0ದು ತಿಳಿದುಬಂದಿದೆ. ಮೃತರು ಪತಿ ಚಿಂತನ್ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಚಿಂತನ್ ಅವರು ಇತ್ತೀಚೆಗೆ ನಡೆದ ನಗರಸಭಾ ಚುನಾವಣೆಯಲ್ಲಿ ನೆಲ್ಲಿಕಟ್ಟೆ ವಾರ್ಡ್ನಿಂದ ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಸ್ಥಳೀಯವಾಗಿ ಗುರುತಿಸಿಕೊಂಡಿದ್ದರು.ವಿಷಯ ತಿಳಿಯುತ್ತಿದ್ದಂತೆಯೇ ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿ ಮಹಜರು ಸಿದ್ಧಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.
ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್ಗೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ನಲ್ಲಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಶಾಲೆಗೆ…
ಊಟ ಮಾಡಿ ಮಲಗಿದ್ದ ವ್ಯಕ್ತಿಯ ಮೇಲೆ ನಡುರಾತ್ರಿ ದುಷ್ಕರ್ಮಿಯೋರ್ವ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಕೂಲಿ…
ಕಳೆದ ತಿಂಗಳು ಅಕ್ಕನ ಮದುವೆಯ ಸಲುವಾಗಿ ಮನೆಯಲ್ಲಿದ್ದ ಹಳೆಯವಸ್ತುಗಳನ್ನೆಲ್ಲ ವಿಲೇವಾರಿ ಮಾಡುತ್ತಿದ್ದೆವು. ಹೊರಗಡೆ ಆಗಲೇ ಲೈಟ್ ಆಗಿ ಮಳೆಯೂ ಪ್ರಾರಂಭವಾಗಿತ್ತು…
ಬೈ0ದೂರು ತಾಲೂಕಿನಾದ್ಯಂತ ಭಾರೀ ಮಳೆ ಸುರಿದಿದ್ದು, ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಕಂಬದಕೋಣೆ ಗ್ರಾಮದ ಹಳಗೇರಿಯಲ್ಲಿ ಎಡಮಾವಿನಹೊಳೆ ಉಕ್ಕಿ ಹರಿಯುತ್ತಿದ್ದು, ಸುತ್ತ ಮುತ್ತಲ…
ರಸ್ತೆ ಸಮೀಪದ ಗುಡ್ಡವೊಂದು ಕುಸಿದು ವಿದ್ಯುತ್ ಕಂಬಗಳಿಗೆ ಹಾನಿಯಾಗಿ ರಸ್ತೆ ಸಂಚಾರ ವ್ಯತ್ಯಯವಾದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕಾಡುಮಠ ಬಳಿಯ…
ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ ಎಂಬಲ್ಲಿ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 18ಕ್ಕೂ ಹೆಚ್ಚು…