ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನಡುರಾತ್ರಿ ಮನೆಗೆ ನುಗ್ಗಿ ಮಲಗಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಬಂಧನ

ಊಟ ಮಾಡಿ ಮಲಗಿದ್ದ ವ್ಯಕ್ತಿಯ ಮೇಲೆ ನಡುರಾತ್ರಿ ದುಷ್ಕರ್ಮಿಯೋರ್ವ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕ ಕರಿಬಸಪ್ಪ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ.

ಕರಿಬಸಪ್ಪ ಮತ್ತು ಮಗಳು ಊಟ ಮಾಡಿ ಮನೆಯಲ್ಲಿ ಮಲಗಿದ್ದ ವೇಳೆ ನಡುರಾತ್ರಿ ಕುಮಾರ್ ಎಂಬ ಆರೋಪಿ ಮನೆಗೆ ನುಗ್ಗಿ ಕತ್ತಿಯಿಂದ ಕರಿಬಸಪ್ಪನಿಗೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಎಚ್ಚರಗೊಂಡ ಮಗಳು ಜೋರಾಗಿ ಕಿರುಚಿಕೊಂಡಿದ್ದಾಳೆ. ಇದರಿಂದ ಎಚ್ಚರಗೊಂಡ ಅಕ್ಕಪಕ್ಕದ ಮನೆಯವರು ಬಂದು ನೋಡಿದಾಗ ಹಲ್ಲೆಯಾಗಿರುವುದು ಗೊತ್ತಾಗಿದೆ. ಕೂಡಲೇ ವಿಚಾರವನ್ನು ವಿಶು ಶೆಟ್ಟಿ ಅಂಬಲಪಾಡಿ ಅವರಿಗೆ ತಿಳಿಸಿದ್ದು ಬಳಿಕ ಬಂದ ಅವರು ಹಲ್ಲೆಗೊಳಗಾದ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಸದ್ಯ ಕರಿಬಸಪ್ಪ ಪ್ರಾಣಪಾಯದಿಂದ ಪಾರಾಗಿದ್ದಾರೆ. ಪೆಟ್ಟು ಸ್ವಲ್ಪ ಕೆಳಗೆ ಬಿದ್ದಿದ್ದರೆ ವ್ಯಕ್ತಿ ಪ್ರಾಣಕ್ಕೆ ಕುತ್ತು ಬರುತ್ತಿತ್ತು. ಕೂಡಲೇ ವಿಶು ಶೆಟ್ಟಿ ತನ್ನ ವಾಹನದಲ್ಲಿ ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆಯಂತೆ ವೆಸ್ಲಾಕ್ ಆಸ್ಪತ್ರೆಗೆ ಆಂಬುಲೆನ್ಸ್ ಮುಖಾಂತರ ಕಳುಹಿಸಿದ್ದಾರೆ.ಪ್ರಕರಣದ ಬಗ್ಗೆ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದು ಆರೋಪಿ ಕುಮಾರನನ್ನು ಬಂಧಿಸಿ, ಹಲ್ಲೆ ಮಾಡಿದ ಕತ್ತಿಯನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!