ಊಟ ಮಾಡಿ ಮಲಗಿದ್ದ ವ್ಯಕ್ತಿಯ ಮೇಲೆ ನಡುರಾತ್ರಿ ದುಷ್ಕರ್ಮಿಯೋರ್ವ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕ ಕರಿಬಸಪ್ಪ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ.
ಕರಿಬಸಪ್ಪ ಮತ್ತು ಮಗಳು ಊಟ ಮಾಡಿ ಮನೆಯಲ್ಲಿ ಮಲಗಿದ್ದ ವೇಳೆ ನಡುರಾತ್ರಿ ಕುಮಾರ್ ಎಂಬ ಆರೋಪಿ ಮನೆಗೆ ನುಗ್ಗಿ ಕತ್ತಿಯಿಂದ ಕರಿಬಸಪ್ಪನಿಗೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಎಚ್ಚರಗೊಂಡ ಮಗಳು ಜೋರಾಗಿ ಕಿರುಚಿಕೊಂಡಿದ್ದಾಳೆ. ಇದರಿಂದ ಎಚ್ಚರಗೊಂಡ ಅಕ್ಕಪಕ್ಕದ ಮನೆಯವರು ಬಂದು ನೋಡಿದಾಗ ಹಲ್ಲೆಯಾಗಿರುವುದು ಗೊತ್ತಾಗಿದೆ. ಕೂಡಲೇ ವಿಚಾರವನ್ನು ವಿಶು ಶೆಟ್ಟಿ ಅಂಬಲಪಾಡಿ ಅವರಿಗೆ ತಿಳಿಸಿದ್ದು ಬಳಿಕ ಬಂದ ಅವರು ಹಲ್ಲೆಗೊಳಗಾದ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಸದ್ಯ ಕರಿಬಸಪ್ಪ ಪ್ರಾಣಪಾಯದಿಂದ ಪಾರಾಗಿದ್ದಾರೆ. ಪೆಟ್ಟು ಸ್ವಲ್ಪ ಕೆಳಗೆ ಬಿದ್ದಿದ್ದರೆ ವ್ಯಕ್ತಿ ಪ್ರಾಣಕ್ಕೆ ಕುತ್ತು ಬರುತ್ತಿತ್ತು. ಕೂಡಲೇ ವಿಶು ಶೆಟ್ಟಿ ತನ್ನ ವಾಹನದಲ್ಲಿ ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆಯಂತೆ ವೆಸ್ಲಾಕ್ ಆಸ್ಪತ್ರೆಗೆ ಆಂಬುಲೆನ್ಸ್ ಮುಖಾಂತರ ಕಳುಹಿಸಿದ್ದಾರೆ.ಪ್ರಕರಣದ ಬಗ್ಗೆ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದು ಆರೋಪಿ ಕುಮಾರನನ್ನು ಬಂಧಿಸಿ, ಹಲ್ಲೆ ಮಾಡಿದ ಕತ್ತಿಯನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…