ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಕೂರೇಲು ಎಂಬಲ್ಲಿ ವಿದ್ಯುತ್ ಶಾಕ್ ಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಕೂರೇಲು ನಿವಾಸಿ ಪುರಂದರ ಎಂಬವರ ಪತ್ನಿ ಜಲಜಾಕ್ಷಿ (38) ಎಂದು ಗುರುತಿಸಲಾಗಿದೆ. ಇವರು ಮದ್ಯಾಹ್ನ 2.30 ರ ವೇಳೆಗೆ ತಮ್ಮ ತೋಟದಲ್ಲಿರುವ ಕೃಷಿ ಪಂಪು ಚಾಲನೆ ಮಾಡಲು ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಅವರನ್ನು ಕಾಣಿಯೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿತ್ತಾದರೂ ಅಷ್ಟರಲ್ಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಸವಣೂರು ಶಾಖಾ ಕಛೇರಿಯ ಶಾಖಾಧಿಕಾರಿ ರಾಜೇಶ್, ಚಾರ್ವಾಕ ಸಿ.ಎ. ಬ್ಯಾಂಕ್ ಅಧ್ಯಕ್ಷ ಗಣೇಶ್ ಉದನಡ್ಕ, ಕಾಣಿಯೂರು ಗ್ರಾಮ ಪಂಚಾಯಿತಿ ಪಿಡಿಒ ರಘು ಬಿ.ಎನ್., ಸದಸ್ಯರಾದ ಲೋಕಯ್ಯ ಪರವ, ದೇವಿಪ್ರಸಾದ್, ಅಂಬಾಕ್ಷಿ, ತಾರಾನಾಥ ಮತ್ತಿತರರು ಭೇಟಿ ನೀಡಿದರು. ಮೃತರಿಗೆ ಆರು ಹಾಗೂ ಮೂರನೆ ತರಗತಿಯಲ್ಲಿ ಓದುತ್ತಿರುವ ಇಬ್ಬರು ಗಂಡು ಮಕ್ಕಳಿದ್ದಾರೆ.
ಅಹ್ಮದಾಬಾದ್ ವಿಮಾನ ದುರಂತದ ಬೆನ್ನಲ್ಲೇ ಏರ್ ಇಂಡಿಯಾದ ಮತ್ತೊಂದು ವಿಮಾನ ಸಂಚಾರ ರದ್ದುಗೊಳಿಸಲಾಗಿದೆ. ಇದು ಕೂಡ ಬೋಯಿಂಗ್ 787 ವಿಮಾನ…
ಧಾರಾಕಾರ ಮಳೆಯ ನಡುವೆ ಭೂಮಿಕಂಪಿಸಿದ ಅನುಭವ ವಾದ ಘಟನೆ ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ನಡೆದಿದ್ದು, ಸಂಬ0ದ ಪಟ್ಟ ಇಲಾಖಾಧಿಕಾರಿಗಳು…
ಮಳೆಗಾಲ ಬಂದರೆ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳಿಗೆ ಸಂಕಷ್ಟ ಎದುರಾಗುತ್ತದೆ. ತಗ್ಗು ಪ್ರದೇಶದಲ್ಲಿ ನೀರು ನಿಲ್ಲುವುದರಿಂದ ಜಿಂಕೆ, ಕಾಡು ಕೋಣ, ಕರಡಿ,…
ರಾಜ್ಯ ಸರ್ಕಾರದ ಅದಕ್ಷ ಆಡಳಿತ ಕ್ರಮದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23ರಂದು, ಬಿಜೆಪಿ ಸಮಿತಿಯ ನೇತೃತ್ವದಲ್ಲಿ ಜನ…
ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ಐದನೇ ರ್ಯಾಂಕ್ ರಾಜ್ಯಕ್ಕೆ ಮೊದಲನೇ ರ್ಯಾಂಕ್ ಪಡೆದ ನಮ್ಮ ಹುಣಸೂರಿನ ಕುವರ ಎಸ್ ಶ್ರೇಯಸ್ ರನ್ನು…
ಬ್ರಹ್ಮಾವರ ತಾಲೂಕು ಯಡ್ತಾಡಿ ಗ್ರಾಮದ ಪ್ರಗತಿಪರ ರೈತ ಹಾಗೂ ಸಮಾಜಸೇವಕ 79ರ ಇಳಿ ವಯಸ್ಸಿನ ಯಡ್ತಾಡಿ ಸತೀಶಕುಮಾರ ಶೆಟ್ಟಿ ಅವರು…