ಬಿಜೆಪಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದಿಂದ ತನ್ನನ್ನು ಏಕಾಏಕಿಯಾಗಿ ಬದಲಾವಣೆ ಮಾಡಿರುವುದಕ್ಕೆ ಕಿಶೋರ್ ಕುಮಾರ್ ಕುಂದಾಪುರ ಅಸಮಾಧಾನ ಹೊರಹಾಕಿದ್ದಾರೆ.
ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಪಕ್ಷದ ವರಿಷ್ಠರ ನಿರ್ಧಾರದ ವಿರುದ್ಧ ಗುಡುಗಿದ್ದಾರೆ. ಪಕ್ಷ ಏನೆಲ್ಲ ಜವಾಬ್ದಾರಿಗಳನ್ನು ನನಗೆ ಕೊಟ್ಟಿದೆಯೋ ಅದನ್ನು ನನ್ನ ಎಲ್ಲ ಪದಾಧಿಕಾರಿಗಳ ಸಹಕಾರದೊಂದಿಗೆ ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ನಿಭಾಯಿಸಿದ್ದೇನೆ. ನಾನು ಪಕ್ಷದ ಹೆಸರಲ್ಲಿ ಯಾವುದೇ ಹಣ ವಸೂಲಿ ಮಾಡಿಲ್ಲ. ರಾಜ್ಯಕ್ಕೆ ಯಾವುದೇ ಸುಳ್ಳು ವರದಿ ಕಳುಹಿಸಿಲ್ಲ. ಆದರೆ ನನ್ನಿಂದ ಏನೂ ತೊಂದರೆ ಆಯ್ತು ಅಂತಾ ಗೊತ್ತಿಲ್ಲ. ನಾನು ಕಾರ್ಯಕರ್ತರ ಮಧ್ಯೆ ಇದ್ದು ಬೆಳೆದು ಬಂದವನು. ಯಾವುದೇ ನಾಯಕರ ಹಿಂಬಾಲಕರಾಗಿ ಇದ್ದುಕೊಂಡು ಬಂದವನಲ್ಲ ಎಂದು ನಿರ್ಗಮಿತ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಬಳಿಕ ಸನ್ಮಾನ ಸ್ವೀಕರಿಸದೆ, ಪಕ್ಷದ ಶಾಲನ್ನು ವೇದಿಕೆಯಲ್ಲೇ ಬಿಟ್ಟು ಪಕ್ಷದ ನಿರ್ಧಾರದ ವಿರುದ್ಧ ಬೇಸರದಿಂದಲೇ ವೇದಿಕೆಯಿಂದ ಹೊರನಡೆದಿದ್ದಾರೆ.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…