ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬ್ರಹ್ಮಾವರ: 42 ವರ್ಷಗಳ ಸತತ ಯೋಗ ಅಭ್ಯಾಸಿಯ ಅನಿಸಿಕೆ

ಬ್ರಹ್ಮಾವರ ತಾಲೂಕು ಯಡ್ತಾಡಿ ಗ್ರಾಮದ ಪ್ರಗತಿಪರ ರೈತ ಹಾಗೂ ಸಮಾಜಸೇವಕ 79ರ ಇಳಿ ವಯಸ್ಸಿನ ಯಡ್ತಾಡಿ ಸತೀಶಕುಮಾರ ಶೆಟ್ಟಿ ಅವರು ಯೋಗ ಧ್ಯಾನ ಹಾಗೂ ಪ್ರಾಣಾಯಾಮದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊ0ಡಿದ್ದಾರೆ.

ತಾವು 1983 ರಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯ ಯೋಗ ವಿಭಾಗದಿಂದ ವೈಜ್ಞಾನಿಕವಾಗಿ ಯೋಗ ಕಲಿತು ಪ್ರತಿದಿನ ತಪ್ಪದೇ ಬೆಳಿಗ್ಗೆ ಮತ್ತು ಸಂಜೆ ತಲಾ ಒಂದು ಘಂಟೆ ಯೋಗಾಭ್ಯಾಸ ಮಾಡುತ್ತಿದ್ದು ತಮ್ಮ ಆರೋಗ್ಯ ಕಾಪಾಡಿಕೊಂಡಿರುವುದಾಗಿ ತಿಳಿಸಿರುತ್ತಾರೆ. ಇವರು ಹಲವಾರು ಯೋಗ ಶಿಬಿರಗಳಲ್ಲಿ ಭಾಗವಹಿಸಿ ಯೋಗದ ಕುರಿತು ಪ್ರಾತ್ಯಕ್ಷಿಕೆ ಹಾಗೂ ಸಲಹೆ ಸೂಚನೆ ನೀಡಿರುತ್ತಾರೆ. ನಮ್ಮ ದೇಶದ ಪ್ರಾಚೀನ ಋಷಿ ಪರಂಪರೆಯಿ0ದ ಬಂದ ಈ ಜ್ಞಾನ ಭಂಡಾರದ ಕುರಿತು ಹಲವಾರು ಪುಸ್ತಕಗಳನ್ನು ಓದಿ ಅದರ ಪ್ರಯೋಜನ ಪಡೆದಿರುತ್ತಾರೆ. ತಮ್ಮ ಮಕ್ಕಳಿಗೂ ಚಿಕ್ಕಂದಿನಲ್ಲೇ ಯೋಗಾಭ್ಯಾಸದ ಕುರಿತು ಆಸಕ್ತಿ ಹುಟ್ಟಿಸಿರುತ್ತಾರೆ. ಯೋಗ ಅಭ್ಯಾಸವನ್ನು ನುರಿತ ಗುರುಗಳಿಂದಲೇ ಅವರ ಮಾರ್ಗದರ್ಶನದಲ್ಲಿ ಯೋಗ ಕಲಿಯಬೇಕೆಂದು ಅವರ ಸಲಹೆ. ಯೋಗಾಭ್ಯಾಸವನ್ನು ಎಂಟು ವರ್ಷದ ಮಕ್ಕಳ ನಂತರ ವೃದ್ಧರೂ ಅತಿವೃದ್ಧರೂ ವ್ಯಾಧಿತರೂ ದುರ್ಬಲರೂ ಅವರವರ ಶಕ್ತ್ಯಾನುಸಾರ ನಿರಂತರ ಮಾಡಿದಲ್ಲಿ ಸಿದ್ಧಿಯನ್ನು ಪಡೆಯಬಹುದು. ಪ್ರತಿದಿನ ಬೆಳಿಗ್ಗೆ ಶೌಚ, ದಂತ ಧಾವನಾದಿಗಳನ್ನು ತೀರಿಸಿ, ಪ್ರಶಾಂತ ಗಾಳಿ ಬೆಳಕು ಇರುವ ವಾತಾವರಣದಲ್ಲಿ ಯೋಗ ಪ್ರಾಣಾಯಾಮ ಧ್ಯಾನ ಮಾಡತಕ್ಕದ್ದು. ಸಹನೆ, ಶ್ರದ್ಧೆ, ಮಿತ ಆಹಾರ, ತಾಳ್ಮೆಯಿಂದ ಯೋಗಾಭ್ಯಾಸ ಮಾಡಿದಲ್ಲಿ ತುಂಬಾ ಪ್ರಯೋಜನ ಪಡೆಯಬಹುದು ಎಂದು ಶೆಟ್ಟರ ಅಭಿಪ್ರಾಯ. ತನ್ನ ನಿರಂತರ ಯೋಗ ಸಾಧನೆಗೆ ಸಹಕರಿಸಿದ ಮಣಿಪಾಲ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರಾದ ಡಾಕ್ಟರ್ ಮಂಜುನಾಥ ಹಂದೆ ಅಲ್ಲದೆ ತಮ್ಮ ಕುಟುಂಬ ವೈದ್ಯರಾದ ಡಾಕ್ಟರ್ ರಾಮಚಂದ್ರ ಬಾಯಿರಿ ಹಾಗೂ ಮಣಿಪಾಲದ ಯೋಗ ಕೇಂದ್ರದವರಿಗೂ ಅವರು ತಮ್ಮ ಕೃತಜ್ಞತೆ ವ್ಯಕ್ತಪಡಿಸಿರುತ್ತಾರೆ. ನಮ್ಮ ಪ್ರಧಾನಮಂತ್ರಿ ಮೋದಿ ಅವರು ಪ್ರತಿವರ್ಷ ಜೂನ್ 21ರಂದು ವಿಶ್ವಯೋಗ ದಿನವೆಂದು ಘೋಷಿಸಿದ್ದು ಅದು ಈಗ ವಿಶ್ವದಾದ್ಯಂತ ಜನಪ್ರಿಯವಾಗಿದೆ. ಈ ವಿಶ್ವಯೋಗ ದಿನದ ಪ್ರಯೋಜನವನ್ನು ಎಲ್ಲರೂ ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ವಿಶ್ವ ಯೋಗ ದಿನಾಚರಣೆಯ ಸಂದರ್ಭ ಸಂದೇಶ ನೀಡಿರುತ್ತಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!