ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ಐದನೇ ರ್ಯಾಂಕ್ ರಾಜ್ಯಕ್ಕೆ ಮೊದಲನೇ ರ್ಯಾಂಕ್ ಪಡೆದ ನಮ್ಮ ಹುಣಸೂರಿನ ಕುವರ ಎಸ್ ಶ್ರೇಯಸ್ ರನ್ನು ಸತ್ಯಪ್ಪ ಹಾಗೂ ಗೌರಿಶಂಕರ್ ರವರ ನೇತೃತ್ವದಲ್ಲಿ ಇಂದು ಮಧು ಗ್ರೂಪ್ಸ್ ಹೂಟಗಳ್ಳಿ ಕಚೇರಿಯಲ್ಲಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸತ್ಯಪ್ಪ ರವರು ಮಾತನಾಡಿ ಕೇಂದ್ರ ಲೋಕಸೇವಾ ಯುಪಿಎಸ್ ಸಿ ನಡೆಸುವ ಕೇಂದ್ರೀಯ ಪೊಲೀಸ್ ಶಶಸ್ತ್ರ ಪಡೆ ಪರೀಕ್ಷೆ 2024ರಲ್ಲಿ ಸಿಎಪಿಎಫ್ ಎಸ್ ಶ್ರೇಯಸ್ ದೇಶಕ್ಕೆ 5ನೇ ರ್ಯಾಂಕ್ ಪಡೆದಿದ್ದು ಕರ್ನಾಟಕ ರಾಜ್ಯಕ್ಕೆ ಮೊದಲನೇ ರ್ಯಾಂಕ್ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದು ಇವರು ನಮ್ಮ ಹುಣಸೂರು ತಾಲೂಕಿನವರಾಗಿದ್ದು ಕಸಬಾ ಹೋಬಳಿ ಮರದೂರು ಗ್ರಾಮದ ಎಚ್ಎಸ್ ಸಿದ್ದರಾಮೇ ಗೌಡ ಹಾಗೂ ಸುಜಾತಾ ದಂಪತಿಗಳ ಪುತ್ರರಾಗಿದ್ದಾರೆ. ಈ ಹುಡುಗನ ತಂದೆ ಎಚ್ಎಸ್ ಸಿದ್ದರಾಮೇಗೌಡ ರವರು, ಇವರು ರೈತ ಕುಟುಂಬಕ್ಕೆ ಸೇರಿದವರಾಗಿರುತ್ತಾರೆ. ತಾಲೂಕಿಗೆ ಕೀರ್ತಿ ತಂದ ಎಸ್ ಶ್ರೇಯಸ್ ರವರನ್ನು ಆದರ್ಶವಾಗಿಟ್ಟುಕೊಂಡು ವಿದ್ಯಾರ್ಥಿಗಳು ತಮ್ಮ ಓದಿನೊಂದಿಗೆ ಇಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ತಮ್ಮ ತಂದೆ ತಾಯಿಗಳಿಗೆ ಹೆಮ್ಮೆ ತರುವುದಲ್ಲದೆ ತಮ್ಮ ಜೀವನವನ್ನು ಯಶಸ್ವಿಗೊಳಿಸಿಕೊಳ್ಳಬಹುದು ಎಂದು ಉತ್ತಮ ಭವಿಷ್ಯದ ನಿರೀಕ್ಷೆಯಲ್ಲಿರುವ ವಿದ್ಯಾವಂತ ಯುವಕ ಯುವತಿಯರಿಗೆ ಸಲಹೆ ನೀಡಿದ್ದಾರೆ. ಗೌರಿಶಂಕರ್ (ಮಧು ಬಿಳಿಕೆರೆ) ಅವರು ಮಾತನಾಡಿ ಗ್ರಾಮೀಣ ಪ್ರದೇಶದ ರೈತರ ಮಗ ಯುಪಿಎಸ್ಸಿಯಲ್ಲಿ ರ್ಯಾಂಕ್ ಬಂದಿರುವುದು ಒಂದು ಹೆಮ್ಮೆಯ ವಿಷಯ. ವಿದ್ಯಾರ್ಥಿಗಳು ಇವರ ಆದರ್ಶದಲ್ಲಿ ಮುಂದುವರಿಯಬೇಕೆ0ದು ಹೇಳಿದರು. ಈ ಸಂದರ್ಭದಲ್ಲಿ ಲೋಕೇಶ್ ಅಸಿಸ್ಟೆಂಟ್ ಡಿಫೆನ್ಸ್ ಎಸ್ಟೇಟ್ ಆಫೀಸರ್, ಲೋಕೇಶ್ ಉದ್ಯಮಿಗಳು, ಮೋಹನ್ ಮಾಜಿ ಸೈನಿಕರು, ಶಿವಶಂಕರ್ (ಮನು), ಶಿವರಾಜೆ ಗೌಡ ನಿವೃತ್ತ ಡೆಪ್ಯುಟಿ ತಹಸಿಲ್ದಾರ್, ವಿಷ ಕಂಠೇಗೌಡ, ಮಂಜುನಾಥ ಬ್ರಿಕ್ಸ್ ಮಾಲೀಕರು ಮುಂತಾದವರು ಹಾಜರಿದ್ದರು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…