ಮಳೆಗಾಲ ಬಂದರೆ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳಿಗೆ ಸಂಕಷ್ಟ ಎದುರಾಗುತ್ತದೆ. ತಗ್ಗು ಪ್ರದೇಶದಲ್ಲಿ ನೀರು ನಿಲ್ಲುವುದರಿಂದ ಜಿಂಕೆ, ಕಾಡು ಕೋಣ, ಕರಡಿ, ಮಂಗಗಳು ಇನ್ನಿತರ ಪ್ರಾಣಿಗಳಿಗೆ ಅಲ್ಲಿ ಸರಿಯಾದ ವ್ಯವಸ್ಥೆ ಇಲ್ಲ. ಈ ಬಾರಿಯೂ ಮೃಗಾಲಯದ ಒಳಗಡೆ ನೀರು ಶೇಖರಣೆಯಾಗಿದ್ದು, ಪ್ರಾಣಿಗಳು ಒದ್ದೆಯಾಗಿ ಸಂಕಷ್ಟ ಪಡುತ್ತಿರುವುದು ಕಂಡುಬ0ದಿದೆ.
ಇದಲ್ಲದೆ, 2-3 ದಿನದಿಂದ ಪ್ರಾಣಿಗಳಿಗೆ ಆಹಾರ ಕೊಡುವುದರಲ್ಲಿಯೂ ವ್ಯತ್ಯಯ ಉಂಟಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಪಿಲಿಕುಳ ಪ್ರಾಧಿಕಾರದ ಪ್ರಭಾರ ಆಯುಕ್ತರೂ, ಪಶು ಸಂಗೋಪನಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಅವರಲ್ಲಿ ಕೇಳಿದಾಗ, ಒಂದನೇದಾಗಿ ಮೃಗಾಲಯ ತಗ್ಗಿನ ಜಾಗದಲ್ಲಿದ್ದು ಅದರಿಂದಾಗಿ ಮಳೆಗಾಲದಲ್ಲಿ ನೀರು ನಿಲ್ಲುತ್ತಿದೆ. ಅದನ್ನು ಸರಿಪಡಿಸುತ್ತಿದ್ದೇವೆ. ಜೊತೆಗೆ, ಈ ಬಾರಿ ಎರಡು ಕಡೆ ತಡೆಗೋಡೆ ಕುಸಿತಗೊಂಡು ನೀರು ಶೇಖರಣೆಯಾಗಿದೆ. ಪ್ರಾಣಿಗಳಿಗೆ ಆಹಾರ ನೀಡಿಕೆಯಲ್ಲಿ ವ್ಯತ್ಯಯ ಆಗಿಲ್ಲ. ವೆಜಿಟೇಬಲ್ ಆಹಾರ ಎಂದಿನ0ತೆ ನೀಡುತ್ತಿದ್ದೇವೆ. ಸಸ್ಯಾಹಾರಿ ಪ್ರಾಣಿಗಳ ಬೂಸಾ ನೀಡಿಕೆಯಲ್ಲಿ ವ್ಯತ್ಯಯ ಆಗಿದ್ದು ಅದನ್ನು ಸರಿಪಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಅಹ್ಮದಾಬಾದ್ ವಿಮಾನ ದುರಂತದ ಬೆನ್ನಲ್ಲೇ ಏರ್ ಇಂಡಿಯಾದ ಮತ್ತೊಂದು ವಿಮಾನ ಸಂಚಾರ ರದ್ದುಗೊಳಿಸಲಾಗಿದೆ. ಇದು ಕೂಡ ಬೋಯಿಂಗ್ 787 ವಿಮಾನ…
ಧಾರಾಕಾರ ಮಳೆಯ ನಡುವೆ ಭೂಮಿಕಂಪಿಸಿದ ಅನುಭವ ವಾದ ಘಟನೆ ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ನಡೆದಿದ್ದು, ಸಂಬ0ದ ಪಟ್ಟ ಇಲಾಖಾಧಿಕಾರಿಗಳು…
ರಾಜ್ಯ ಸರ್ಕಾರದ ಅದಕ್ಷ ಆಡಳಿತ ಕ್ರಮದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23ರಂದು, ಬಿಜೆಪಿ ಸಮಿತಿಯ ನೇತೃತ್ವದಲ್ಲಿ ಜನ…
ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ಐದನೇ ರ್ಯಾಂಕ್ ರಾಜ್ಯಕ್ಕೆ ಮೊದಲನೇ ರ್ಯಾಂಕ್ ಪಡೆದ ನಮ್ಮ ಹುಣಸೂರಿನ ಕುವರ ಎಸ್ ಶ್ರೇಯಸ್ ರನ್ನು…
ಬ್ರಹ್ಮಾವರ ತಾಲೂಕು ಯಡ್ತಾಡಿ ಗ್ರಾಮದ ಪ್ರಗತಿಪರ ರೈತ ಹಾಗೂ ಸಮಾಜಸೇವಕ 79ರ ಇಳಿ ವಯಸ್ಸಿನ ಯಡ್ತಾಡಿ ಸತೀಶಕುಮಾರ ಶೆಟ್ಟಿ ಅವರು…
ಇತ್ತೀಚಿಗೆ ದೇಶದ ಮೂಲೆ ಮೂಲೆಯಲ್ಲೂ ಕೇಳಿಬರುತ್ತಿರುವ ಒಂದೇ ಒಂದೇ ಶಬ್ದ ಅದು ವಿಕಸಿತ ಭಾರತ. ಏನಿದು ಕೇಂದ್ರಸರಕಾರದ ಮಿಷನ್ ವಿಕಸಿತ…