ಮಳೆಗಾಲ ಬಂದರೆ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳಿಗೆ ಸಂಕಷ್ಟ ಎದುರಾಗುತ್ತದೆ. ತಗ್ಗು ಪ್ರದೇಶದಲ್ಲಿ ನೀರು ನಿಲ್ಲುವುದರಿಂದ ಜಿಂಕೆ, ಕಾಡು ಕೋಣ, ಕರಡಿ, ಮಂಗಗಳು ಇನ್ನಿತರ ಪ್ರಾಣಿಗಳಿಗೆ ಅಲ್ಲಿ ಸರಿಯಾದ ವ್ಯವಸ್ಥೆ ಇಲ್ಲ. ಈ ಬಾರಿಯೂ ಮೃಗಾಲಯದ ಒಳಗಡೆ ನೀರು ಶೇಖರಣೆಯಾಗಿದ್ದು, ಪ್ರಾಣಿಗಳು ಒದ್ದೆಯಾಗಿ ಸಂಕಷ್ಟ ಪಡುತ್ತಿರುವುದು ಕಂಡುಬ0ದಿದೆ.
ಇದಲ್ಲದೆ, 2-3 ದಿನದಿಂದ ಪ್ರಾಣಿಗಳಿಗೆ ಆಹಾರ ಕೊಡುವುದರಲ್ಲಿಯೂ ವ್ಯತ್ಯಯ ಉಂಟಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಪಿಲಿಕುಳ ಪ್ರಾಧಿಕಾರದ ಪ್ರಭಾರ ಆಯುಕ್ತರೂ, ಪಶು ಸಂಗೋಪನಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಅವರಲ್ಲಿ ಕೇಳಿದಾಗ, ಒಂದನೇದಾಗಿ ಮೃಗಾಲಯ ತಗ್ಗಿನ ಜಾಗದಲ್ಲಿದ್ದು ಅದರಿಂದಾಗಿ ಮಳೆಗಾಲದಲ್ಲಿ ನೀರು ನಿಲ್ಲುತ್ತಿದೆ. ಅದನ್ನು ಸರಿಪಡಿಸುತ್ತಿದ್ದೇವೆ. ಜೊತೆಗೆ, ಈ ಬಾರಿ ಎರಡು ಕಡೆ ತಡೆಗೋಡೆ ಕುಸಿತಗೊಂಡು ನೀರು ಶೇಖರಣೆಯಾಗಿದೆ. ಪ್ರಾಣಿಗಳಿಗೆ ಆಹಾರ ನೀಡಿಕೆಯಲ್ಲಿ ವ್ಯತ್ಯಯ ಆಗಿಲ್ಲ. ವೆಜಿಟೇಬಲ್ ಆಹಾರ ಎಂದಿನ0ತೆ ನೀಡುತ್ತಿದ್ದೇವೆ. ಸಸ್ಯಾಹಾರಿ ಪ್ರಾಣಿಗಳ ಬೂಸಾ ನೀಡಿಕೆಯಲ್ಲಿ ವ್ಯತ್ಯಯ ಆಗಿದ್ದು ಅದನ್ನು ಸರಿಪಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ತಿರುವೈಲು ಗುತ್ತುವಿನ 'ದೂಜ' ಹೆಸರಿನ ಕಂಬಳ ಕೋಣ ಶಾಂಭವಿ ನದಿಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಹಲವಾರು ಬಹುಮಾನಗಳನ್ನು…
ಬೆಳ್ತಂಗಡಿ ತಾಲೂಕಿನಲ್ಲಿ ಸೋಮವಾರ ಸಂಜೆ, ಗುಡುಗು, ಸಿಡಿಲು ಸಹಿತ ಬಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಉಜಿರೆಯ ಸಮೀಪ…
ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ ಮಂಗಳೂರಿನ ಫಾದರ್ ಮುಲ್ಲರ್…
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…
ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…