ಮಳೆಗಾಲ ಬಂದರೆ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳಿಗೆ ಸಂಕಷ್ಟ ಎದುರಾಗುತ್ತದೆ. ತಗ್ಗು ಪ್ರದೇಶದಲ್ಲಿ ನೀರು ನಿಲ್ಲುವುದರಿಂದ ಜಿಂಕೆ, ಕಾಡು ಕೋಣ, ಕರಡಿ, ಮಂಗಗಳು ಇನ್ನಿತರ ಪ್ರಾಣಿಗಳಿಗೆ ಅಲ್ಲಿ ಸರಿಯಾದ ವ್ಯವಸ್ಥೆ ಇಲ್ಲ. ಈ ಬಾರಿಯೂ ಮೃಗಾಲಯದ ಒಳಗಡೆ ನೀರು ಶೇಖರಣೆಯಾಗಿದ್ದು, ಪ್ರಾಣಿಗಳು ಒದ್ದೆಯಾಗಿ ಸಂಕಷ್ಟ ಪಡುತ್ತಿರುವುದು ಕಂಡುಬ0ದಿದೆ.
ಇದಲ್ಲದೆ, 2-3 ದಿನದಿಂದ ಪ್ರಾಣಿಗಳಿಗೆ ಆಹಾರ ಕೊಡುವುದರಲ್ಲಿಯೂ ವ್ಯತ್ಯಯ ಉಂಟಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಪಿಲಿಕುಳ ಪ್ರಾಧಿಕಾರದ ಪ್ರಭಾರ ಆಯುಕ್ತರೂ, ಪಶು ಸಂಗೋಪನಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಅವರಲ್ಲಿ ಕೇಳಿದಾಗ, ಒಂದನೇದಾಗಿ ಮೃಗಾಲಯ ತಗ್ಗಿನ ಜಾಗದಲ್ಲಿದ್ದು ಅದರಿಂದಾಗಿ ಮಳೆಗಾಲದಲ್ಲಿ ನೀರು ನಿಲ್ಲುತ್ತಿದೆ. ಅದನ್ನು ಸರಿಪಡಿಸುತ್ತಿದ್ದೇವೆ. ಜೊತೆಗೆ, ಈ ಬಾರಿ ಎರಡು ಕಡೆ ತಡೆಗೋಡೆ ಕುಸಿತಗೊಂಡು ನೀರು ಶೇಖರಣೆಯಾಗಿದೆ. ಪ್ರಾಣಿಗಳಿಗೆ ಆಹಾರ ನೀಡಿಕೆಯಲ್ಲಿ ವ್ಯತ್ಯಯ ಆಗಿಲ್ಲ. ವೆಜಿಟೇಬಲ್ ಆಹಾರ ಎಂದಿನ0ತೆ ನೀಡುತ್ತಿದ್ದೇವೆ. ಸಸ್ಯಾಹಾರಿ ಪ್ರಾಣಿಗಳ ಬೂಸಾ ನೀಡಿಕೆಯಲ್ಲಿ ವ್ಯತ್ಯಯ ಆಗಿದ್ದು ಅದನ್ನು ಸರಿಪಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…