ಜನ ಮನದ ನಾಡಿ ಮಿಡಿತ

ವಿಟ್ಲ: ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ಭೂಮಿಕಂಪನ…!

ಧಾರಾಕಾರ ಮಳೆಯ ನಡುವೆ ಭೂಮಿಕಂಪಿಸಿದ ಅನುಭವ ವಾದ ಘಟನೆ ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ನಡೆದಿದ್ದು, ಸಂಬ0ದ ಪಟ್ಟ ಇಲಾಖಾಧಿಕಾರಿಗಳು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ಜನರಿಗೆ ಒಂದು ಕ್ಷಣಕ್ಕೆ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು, ಇದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಭುಮಿ ಕಂಪಿಸಿದ ಅನುಭವ ಕೇವಲ ಒಂದೆರಡು ಸೆಕೆಂಡ್ ಮಾತ್ರ ಉಂಟಾಗಿದೆ. ಈ ಘಟನೆ ಬಗ್ಗೆ ವ್ಯಕ್ತಿಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಹರಿಯಬಿಟ್ಟಿದ್ದು, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್, ಗ್ರಾಮ ಕರಣಿಕ ಅನಿಲ್ ಮತ್ತು ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ನಡೆದ ಪ್ರದೇಶದ ಮನೆಗಳಿಗೆ ಭೇಟಿ ನೀಡಿದ್ದು, ಯಾವುದೇ ಮನೆಯಲ್ಲಿ ಹಾನಿಯಾಗಿರುವ ಬಗ್ಗೆ ಕಂಡು ಬಂದಿಲ್ಲ. ಮುಂದೆ ಇಂತಹ ಅನುಭವ ವಾದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಅಧಿಕಾರಿಗಳು ಸ್ಥಳೀಯರಿಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕೊಲ್ಕತ್ತಾದ ಏರ್ ಇಂಡಿಯಾದ ವಿಮಾನದಲ್ಲಿ ದೋಷ!!!???

ಮಂಗಳೂರು: ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಪರದಾಟ..!

ಮಂಗಳೂರು: ಸರ್ಕಾರದ ವಿರುದ್ದ ಕೇಳಿ ಬರುತ್ತಿವೆ ಭ್ರಷ್ಟಾಚಾರದ ಆರೋಪಗಳು ; ಕ್ಯಾ.ಬ್ರಿಜೇಶ್ ಚೌಟ

ಹುಣಸೂರು: ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ ಐದನೇ ರ‍್ಯಾಂಕ್ ರಾಜ್ಯಕ್ಕೆ ಮೊದಲನೇ ರ‍್ಯಾಂಕ್ ಪಡೆದ ಹುಣಸೂರಿನ ಎಸ್ ಶ್ರೇಯಸ್

ಬ್ರಹ್ಮಾವರ: 42 ವರ್ಷಗಳ ಸತತ ಯೋಗ ಅಭ್ಯಾಸಿಯ ಅನಿಸಿಕೆ

ಮಿಷನ್ “ವಿಕಸಿತ್ ಭಾರತ್ 2047”

ಉಡುಪಿ: ನೆರೆನೀರಿನಲ್ಲಿ ಬೈಕ್ ಚಲಾಯಿಸಿ ಯುವಕರ ಹುಚ್ಚಾಟ ; ವಿಡಿಯೋ ವೈರಲ್

ಉಡುಪಿ: ಯುವ ಪಡೆಯನ್ನು ಸಂಘಟಿಸಿ ಪಕ್ಷದ ಬಲವರ್ಧನೆ ಮಾಡಬೇಕಿದೆ; ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ನಾನು ಪಕ್ಷದ ಹೆಸರಲ್ಲಿ ಯಾವುದೇ ಹಣ ವಸೂಲಿ ಮಾಡಿಲ್ಲ; ಕಿಶೋರ್ ಕುಮಾರ್ ಕುಂದಾಪುರ

error: Content is protected !!