ದ.ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರುಗಳ ಮತ್ತು ಸದಸ್ಯರ ಸಭೆ ಇತ್ತೀಚೆಗೆ ಮಂಗಳೂರು ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.
ಈ ಸಭೆಯಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕನ್ವರ್ಷನ್ , ಏಕ ನಿವೇಶನ ಪರವಾನಿಗೆ , ವಿನ್ಯಾಸ ನಕ್ಷೆ , ಕಟ್ಟಡ ನಿರ್ಮಾಣ ಪರವಾನಿಗೆ , ರಸ್ತೆ ಅಗಲದ ಮಾನದಂಡ , ಮೊದಲಾದವುಗಳಿಗೆ ಸಂಬ0ಧಿಸಿದ ಕಾನೂನು ತೊಡಕು ಹಾಗೂ ಅದರಿಂದು0ಟಾಗುವ ಸಮಸ್ಯೆ ಗಳ ಬಗ್ಗೆ ವಿಸ್ತೃವಾಗಿ ಚರ್ಚಿಸಲಾಯಿತು. ತುಂಡು ಭೂಮಿ, ಟ್ರಬ್ಯುನಲ್ ಮಂಜೂರಾತಿ, ಬಫರ್, ಕುಮ್ಕಿ , ಕಾನ , ಬಾಣೆ ಹೆಚ್ಚು ಇರುವ , ಬೆಟ್ಟ ಗುಡ್ಡಗಳಿಂದ ಕೂಡಿದ ವಿಭಿನ್ನ ಭೂಲಕ್ಷಣ ಹೊಂದಿರುವ ಕರಾವಳಿ ಪ್ರದೇಶಕ್ಕೆ ಅನ್ವಯವಾಗುವ ರೀತಿಯಲ್ಲಿ ಪ್ರತ್ಯೇಕ ಕೋಸ್ಟಲ್ ಝೋನ್ ರೂಲ್ಸ್ (ಸಿ.ಝೆಡ್.ಆರ್.) ರೂಪಿಸಿ, ಪ್ರತ್ಯೇಕ ಮಾರ್ಗಸೂಚಿಯನ್ನು ಅನುಷ್ಠಾಗೊಳಿಸಬೇಕೆಂದು ಮತ್ತು ಇತ್ತೀಚಿಗೆ ಜಾರಿ ಗೊಳಿಸಲಾದ ಗ್ರಾಮ ಪಂಚಾಯತ್ ವ್ಯಾಪ್ತಿಯ 9/11 ನಿಯಮಾವಳಿಗಳನ್ನು ಸರಳೀಕರ ಗೊಳಿಸಲು ಸರ್ಕಾರವನ್ನು ಒತ್ತಾಯಿಸಲು ಜಿಲ್ಲೆಯ ನಾಯಕರ ನೇತೃತ್ವದಲ್ಲಿ ನಿಯೋಗ ತೆರಳುವುದೆಂದು ತೀರ್ಮಾನಿಸಲಾಯಿತು.
ಜನರ ಮತ್ತು ಪ್ರಾಧಿಕಾರಗಳ ಸಮಸ್ಯೆಗಳನ್ನು ಪರಣಾಮಕಾರಿಯಾಗಿ ಸರಕಾರದ ಮುಂದಿಡುವ ಸಲುವಾಗಿ ಮತ್ತು ನಿರಂತರ ಸಮಾಲೋಚನೆ ಮತ್ತು ಸಮಸ್ಯೆಗಳ ನಿವಾರಣೆಗಾಗಿ ಜಿಲ್ಲೆಯ ಎಲ್ಲಾ ಪ್ರಾಧಿಕಾರಗಳನ್ನು ಪ್ರತಿನಿಧಿಸುವ ಉದ್ದೇಶದಿಂದ ಉಭಯ ಜಿಲ್ಲೆಗಳ ಪ್ರಾಧಿಕಾರಗಳ ಒಕ್ಕೂಟವನ್ನು ರಚಿಸಲಾಯಿತು. ಒಕ್ಕೂಟದ ಅಧ್ಯಕ್ಷರಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಸಂಚಾಲಕಾರಾಗಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರ್ ಹಾಗೂ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ ಆಯ್ಕೆಯಾದರು. ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಮೂಡಬಿದಿರೆ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ ಪಡಿವಾಳ್ ಸೇರಿದಂತೆ ಬಂಟ್ವಾಳ, ಮೂಡಬಿದಿರೆ, ಸುಳ್ಯ, ಮಂಗಳೂರು ಮತ್ತು ಉಡುಪಿ ಪ್ರಾಧಿಕಾರಗಳ ಸದಸ್ಯರು ಭಾಗವಹಿಸಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…