ದ.ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರುಗಳ ಮತ್ತು ಸದಸ್ಯರ ಸಭೆ ಇತ್ತೀಚೆಗೆ ಮಂಗಳೂರು ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.
ಈ ಸಭೆಯಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕನ್ವರ್ಷನ್ , ಏಕ ನಿವೇಶನ ಪರವಾನಿಗೆ , ವಿನ್ಯಾಸ ನಕ್ಷೆ , ಕಟ್ಟಡ ನಿರ್ಮಾಣ ಪರವಾನಿಗೆ , ರಸ್ತೆ ಅಗಲದ ಮಾನದಂಡ , ಮೊದಲಾದವುಗಳಿಗೆ ಸಂಬ0ಧಿಸಿದ ಕಾನೂನು ತೊಡಕು ಹಾಗೂ ಅದರಿಂದು0ಟಾಗುವ ಸಮಸ್ಯೆ ಗಳ ಬಗ್ಗೆ ವಿಸ್ತೃವಾಗಿ ಚರ್ಚಿಸಲಾಯಿತು. ತುಂಡು ಭೂಮಿ, ಟ್ರಬ್ಯುನಲ್ ಮಂಜೂರಾತಿ, ಬಫರ್, ಕುಮ್ಕಿ , ಕಾನ , ಬಾಣೆ ಹೆಚ್ಚು ಇರುವ , ಬೆಟ್ಟ ಗುಡ್ಡಗಳಿಂದ ಕೂಡಿದ ವಿಭಿನ್ನ ಭೂಲಕ್ಷಣ ಹೊಂದಿರುವ ಕರಾವಳಿ ಪ್ರದೇಶಕ್ಕೆ ಅನ್ವಯವಾಗುವ ರೀತಿಯಲ್ಲಿ ಪ್ರತ್ಯೇಕ ಕೋಸ್ಟಲ್ ಝೋನ್ ರೂಲ್ಸ್ (ಸಿ.ಝೆಡ್.ಆರ್.) ರೂಪಿಸಿ, ಪ್ರತ್ಯೇಕ ಮಾರ್ಗಸೂಚಿಯನ್ನು ಅನುಷ್ಠಾಗೊಳಿಸಬೇಕೆಂದು ಮತ್ತು ಇತ್ತೀಚಿಗೆ ಜಾರಿ ಗೊಳಿಸಲಾದ ಗ್ರಾಮ ಪಂಚಾಯತ್ ವ್ಯಾಪ್ತಿಯ 9/11 ನಿಯಮಾವಳಿಗಳನ್ನು ಸರಳೀಕರ ಗೊಳಿಸಲು ಸರ್ಕಾರವನ್ನು ಒತ್ತಾಯಿಸಲು ಜಿಲ್ಲೆಯ ನಾಯಕರ ನೇತೃತ್ವದಲ್ಲಿ ನಿಯೋಗ ತೆರಳುವುದೆಂದು ತೀರ್ಮಾನಿಸಲಾಯಿತು.
ಜನರ ಮತ್ತು ಪ್ರಾಧಿಕಾರಗಳ ಸಮಸ್ಯೆಗಳನ್ನು ಪರಣಾಮಕಾರಿಯಾಗಿ ಸರಕಾರದ ಮುಂದಿಡುವ ಸಲುವಾಗಿ ಮತ್ತು ನಿರಂತರ ಸಮಾಲೋಚನೆ ಮತ್ತು ಸಮಸ್ಯೆಗಳ ನಿವಾರಣೆಗಾಗಿ ಜಿಲ್ಲೆಯ ಎಲ್ಲಾ ಪ್ರಾಧಿಕಾರಗಳನ್ನು ಪ್ರತಿನಿಧಿಸುವ ಉದ್ದೇಶದಿಂದ ಉಭಯ ಜಿಲ್ಲೆಗಳ ಪ್ರಾಧಿಕಾರಗಳ ಒಕ್ಕೂಟವನ್ನು ರಚಿಸಲಾಯಿತು. ಒಕ್ಕೂಟದ ಅಧ್ಯಕ್ಷರಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಸಂಚಾಲಕಾರಾಗಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರ್ ಹಾಗೂ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ ಆಯ್ಕೆಯಾದರು. ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಮೂಡಬಿದಿರೆ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ ಪಡಿವಾಳ್ ಸೇರಿದಂತೆ ಬಂಟ್ವಾಳ, ಮೂಡಬಿದಿರೆ, ಸುಳ್ಯ, ಮಂಗಳೂರು ಮತ್ತು ಉಡುಪಿ ಪ್ರಾಧಿಕಾರಗಳ ಸದಸ್ಯರು ಭಾಗವಹಿಸಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…