ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರಿನ ದರ್ಬೆಯಲ್ಲಿ ಎಲೆಕ್ಟ್ರಿಕಲ್ಸ್ ಅಂಗಡಿಯಲ್ಲಿ ಬೆಂಕಿ ಅವಘಡ..!

ಪುತ್ತೂರಿನ ದರ್ಬೆಯಲ್ಲಿ ಮುಖ್ಯ ರಸ್ತೆ ಬದಿಯ ವಾಣಿಜ್ಯ ಸಂಕೀರ್ಣವೊಂದರ ಪ್ರಥಮ ಮಹಡಿಯಲ್ಲಿರುವ ಎಲೆಕ್ಟ್ರಿಕಲ್ಸ್ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದೆ.

ದರ್ಬೆಯ ರೇಗೋ ಬಿಲ್ಡಿಂಗ್ನ ಪ್ರಥಮ ಮಹಡಿಯಲ್ಲಿ ಕಾರ್ಯಚರಿಸುತ್ತಿರುವ ಕೆಮ್ಮಿಂಜೆ ಗ್ರಾಮದ ಬೆದ್ರಾಳ ನಿವಾಸಿ, ಕೆಮ್ಮಿಂಜೆ ಪಣ್ಮುಖ ಸುಬ್ರಹ್ಮಣ್ಯ-ಮಹಾವಿಷ್ಣು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಬೆದ್ರಾಳ ಎಂಬವರ ಮಾಲಕತ್ವದ ನಂದಿಕೇಶ್ವರ ಎಲೆಕ್ಟ್ರಿಕಲ್ಸ್ ಸಂಸ್ಥೆಯ ಸರ್ವಿಸ್ ವಿಭಾಗದಲ್ಲಿ ಮಂಗಳವಾರ ಮಧ್ಯಾಹ್ನ ದಟ್ಟ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸಂಸ್ಥೆಯ ನೌಕರರು ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರೆಂದು ತಿಳಿದು ಬಂದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹತ್ತಿಕೊಂಡಿರಬಹುದೆಂದು ಶಂಕಿಸಲಾಗಿದ್ದು, ಅಂಗಡಿಯೊಳಗಿದ್ದ ಹಲವು ಎಲೆಕ್ಟ್ರಿಕಲ್ಸ್ ಉಪಕರಣಗಳು ಮತ್ತು ಸಾಧನಗಳು ಸುಟ್ಟು ಹೋಗಿವೆ. ಘಟನೆಯಿಂದಾಗಿ ಸುಮಾರು ರೂ.3 ಲಕ್ಷದಷ್ಟು ನಷ್ಟ ಸಂಭವಿಸಿರುವುದಾಗಿ ಮಾಲಕ ಕೇಶವ ಬೆದ್ರಾಳ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!